ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿರುವ ಕೇಂದ್ರ ಸರ್ಕಾರವು, ಕೃಷಿಯಾಧಾರಿತ ತಂತ್ರಜ್ಞಾನ ಕ್ಷೇತ್ರದಲ್ಲಿನ ಸ್ಟಾರ್ಟಪ್ಗೆ ಪ್ರೋತ್ಸಾಹ ನೀಡಲು ನಿಧಿ ಸ್ಥಾಪಿಸಲಿದೆ.ಬುಧವಾರ ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ನಲ್ಲಿ ಈ ವಿಷಯ ಪ್ರಕಟಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ ಸ್ಟಾರ್ಟಪ್ಗಳನ್ನು ಪ್ರಾರಂಭಿಸುವ ಯುವಕರಿಗೆ ಪ್ರೋತ್ಸಾಹ ನೀಡಲು ಈ ನಿಧಿಯನ್ನು ಸ್ಥಾಪಿಸಲಾಗುತ್ತಿದೆ. ಮುಖ್ಯವಾಗಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ಸ್ಟಾರ್ಟಪ್ಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ಕೃಷಿ ಕ್ಷೇತ್ರಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಹೆಚ್ಚಿಸಲಾಗಿದ್ದು, 20 ಲಕ್ಷ ಕೋಟಿ ಎಂದು ಈ ಬಾರಿಯ ಬಜೆಟ್ನಲ್ಲಿ ನಿಗದಿಪಡಿಸಲಾಗಿದೆ.ಅಲ್ಲದೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೊಸೈಟಿಗಳನ್ನು ಕಂಪ್ಯೂಟರೀಕರಣವನ್ನು ಈ ಬಜೆಟ್ನಲ್ಲಿ ಘೋಷಿಸಲಾಗಿದೆ. ದೇಶದ 63,000 ಸಾವಿರ ಸೊಸೈಟಿಗಳನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತದೆ. ಇದಕ್ಕಾಗಿ 2,516 ಕೋಟಿ ತೆಗೆದಿರಿಸಲಾಗಿದೆ.
https://play.google.com/store/apps/details?id=com.speed.newskannada