ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮತಬೇಟೆ ಶುರು ಮಾಡಿವೆ. ಇದರ ಮಧ್ಯೆ ರಾಜಕೀಯ ನಾಯಕರ ಆರೋಪ ಹಾಗೂ ಪ್ರತ್ಯಾರೋಪಗಳು ಜೋರಾಗಿದೆ.
ರಾಜ್ಯ ಚುನಾವಣೆಯ ಕ್ಷಣ ಕ್ಷಣದ ಅಪ್ಡೇಟ್ ಒಂದೇ ಕ್ಲಿಕ್ನಲ್ಲಿ.ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದಂತೆ ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಹೆಚ್ಚುಮಾಡುತ್ತಿವೆ. ನಾನಾ ಸರ್ಕಸ್ಗಳನ್ನು ಮಾಡುತ್ತಿವೆ. ಸದ್ಯ ನಿನ್ನೆ(ಫೆ.27) ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಿ ಅನೇಕ ಕಾಮಗಾರಿ, ಯೋಜನೆಗಳನ್ನು ಉದ್ಘಾಟಿಸಿ ಜನರಲ್ಲಿ ವಿಶ್ವಾಸದ ಬೀಜ ಬಿತ್ತಿದ್ದಾರೆ.
ದೇಶದ ಅಭಿವೃದ್ಧಿ ಬಿಜೆಪಿ ಸರ್ಕಾರದ ಕೈಯಲ್ಲಿದೆ ಎಂಬ ಸಂದೇಶ ಸಾರಿದ್ದಾರೆ. ಮತ್ತೊಂದೆಡೆ ಇತರೆ ಪಕ್ಷಗಳು ಕೂಡ ನಾನಾ ಪ್ರಯತ್ನಕ್ಕೆ ಕೈ ಹಾಕುತ್ತಿವೆ. ಇಂದು ಚಿಕ್ಕಮಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಹಾಗೂ ಗದಗ ಜಿಲ್ಲೆ ರೋಣ, ನರಗುಂದ ಕ್ಷೇತ್ರದಲ್ಲಿ ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬನ್ನಿ ಚುನಾವಣೆಗೆ ರಾಜಕೀಯ ಪಕ್ಷಗಳ ಗುದ್ದಾಟ, ಪ್ರಚಾರ ಇಂದು ಹೇಗಿದೆ ಎಂಬ ಕ್ಷಣ ಕ್ಷಣದ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Wed Mar 1 , 2023
ಹಿಂದೂ ಧರ್ಮದಲ್ಲಿ ಉಗುರುಗಳನ್ನು ಕತ್ತರಿಸಲು ಸರಿಯಾದ ಮಾರ್ಗ ಹಾಗೂ ಸರಿಯಾದ ವಿಧಾನವನ್ನು ವಿವರಿಸಲಾಗಿದೆ. . ಈ ನಿಯಮಗಳನ್ನು ಅಳವಡಿಸಿಕೊಂಡರೆ, ನೀವು ಬಹಳಷ್ಟು ಸಂಪತ್ತು ಮತ್ತು ಜೀವನದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಪ್ರತಿಯೊಂದು ಧರ್ಮದಲ್ಲೂ ಕೆಲವು ಕೆಲಸಗಳನ್ನು ಮಾಡಲು ನಿಯಮಗಳನ್ನು ನೀಡಲಾಗಿದೆ. ಇದು ಉಗುರುಗಳು ಮತ್ತು ಕೂದಲನ್ನು ಕತ್ತರಿಸುವುದು ಮತ್ತು ಶೇವಿಂಗ್ನಂತಹ ದೈನಂದಿನ ಕಾರ್ಯಗಳನ್ನು ಸಹ ಒಳಗೊಂಡಿದೆ. ಹಿಂದೂ ಧರ್ಮಗ್ರಂಥಗಳಲ್ಲಿ ಉಗುರು ಮತ್ತು ಕೂದಲನ್ನು ಕತ್ತರಿಸಲು ಸರಿಯಾದ ದಿನ ಮತ್ತು ಸಮಯವನ್ನು ಹೇಳಲಾಗಿದೆಯಂತೆ. […]