ಈ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ
ಕೃಷ್ಣಾ ನದಿ ವಿಚಾರದಲ್ಲಿ ಬಿಜೆಪಿಯವರು ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ
ಮೂರು ತಿಂಗಳ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ
ಕೃಷ್ಣಾ ಮೂರನೆಯ ಹಂತದ ಕಾಮಗಾರಿಗೆ ಪ್ರತಿ ವರ್ಷ 40ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ
ಇವತ್ತು ರಾಜ್ಯಕ್ಕೆ ಅಮಿತ್ ಷಾ ಬಂದಿದ್ದಾರೆ
ಅವರು ಕೃಷ್ಣಾ ಮತ್ತು ಮಹದಾಯಿ ನೀರಿನ ಬಗ್ಗೆ ಮಾತನಾಡಲ್ಲಾ
ಯಾಕಂದ್ರೆ ಅವರ ಮನಸ್ಸಲ್ಲಿ ಕಳ್ಳನಿದ್ದಾನೆ
ಅಮಿತ್ ಷಾ ಮತ್ತು ನರೇಂದ್ರ ಮೋದಿಯವರು ಕೃಷ್ಣಾ ಮತ್ತು ಮಹದಾಯಿ ನೀರಿನ ಹಕ್ಕಿನಿಂದ ಕರ್ನಾಟಕದ ಜನರನ್ನು ದೂರ ಇಟ್ಟಿದ್ದಾರೆ
ಕರ್ನಾಟಕದ ಜನರು ಅವರ ವಂಚನೆಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು
ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಯಾತ್ರೆಯ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ, ಮೂರು ತಿಂಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ
ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ಎಂಟು ವರ್ಷಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ
ಜನವರಿ 2ರಂದು ಹುಬ್ಬಳ್ಳಿಯಲ್ಲಿ ಮಹದಾಯಿಗಾಗಿ ಹೋರಾಟ ನಡೆಯಲಿದೆ
ಇದರ ಪರಿಣಾಮವಾಗಿ ಮೋಸಗಾರ ಬಿಜೆಪಿಯವರು ಒಂಟೆಯ ಬಾಯಲ್ಲಿ ಜೀರಿಗೆ ಹಾಕುವ ಕೆಲಸ ಮಾಡುತ್ತಿದ್ದಾರೆ
ಫಾರೆಸ್ಟ್ ಕ್ಲಿಯರೆನ್ಸ್, ಹಸಿರು ನ್ಯಾಯಾಧಿಕರಣದ ಕ್ಲಿಯರೆನ್ಸ್, ಕಾಮಗಾರಿ ಟೆಂಡರ್ ಎಲ್ಲಿದೆ?
ಬಿಜೆಪಿ ಸರ್ಕಾರ ಹೊರಟು ಹೋಗುವಾಗ ಇಲ್ಲಸಲ್ಲದ ಮಾತನಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ
ಮುಂದಿನ ಕಾಂಗ್ರೆಸ್ ಸರ್ಕಾರ ಮಹದಾಯಿಗೆ ಮೂರು ಸಾವಿರ ಕೋಟಿ ರೂಪಾಯಿ ಅನುದಾನ ಕೊಡಲಿದೆ.
ಮೊದಲ ಕ್ಯಾಬಿನೆಟ್ನಲ್ಲಿ ಐದು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡುತ್ತೇವೆ
ಇದು ಕಾಂಗ್ರೆಸ್ ಪಕ್ಷದ ಬದ್ಧತೆ, ದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…