ಲಾತೂರ್, ಫೆ.03. ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ಅನಾಮಿಕರು ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ ಆಗಿರುವ ಘಟನೆ ವರದಿಯಾಗಿದೆ.
ಮಹಾರಾಷ್ಟ್ರದ ಲಾತೂರು ಬಳಿಕ ಔರಾದ ಶಹಾಜಾನಿ ನಿಲ್ದಾಣದಿಂದ ನಿಲ್ಲಿಸಲಾಗಿದ್ದ ಬಸ್ಸು ಇದ್ದಕ್ಕಿದ್ದಂತೆ ನಾಪತ್ತೆ ಆಗಿತ್ತು.
ಬಳಿಕ ಈ ಬಸ್ಸು 14 ಕಿ.ಮೀ. ದೂರದ ಕರ್ನಾಟಕದ ಕೇಸರ್ ಜವಳಗಾ ಗ್ರಾಮದ ಬಳಿ ಪತ್ತೆ ಆಗಿದೆ. ಯಾರೋ ಅಪರಿಚಿತ ವ್ಯಕ್ತಿ ಇದನ್ನು ಚಲಾಯಿಸಿಕೊಂಡು ಬಂದು, ಜವಳಗಾ ಗ್ರಾಮದಲ್ಲಿ ನಿಲ್ಲಿಸಿ ಹೋಗಿದ್ದಾನೆ. ಯಾರು ಇದನ್ನು ಮಾಡಿದ್ದು, ಏಕೆ ಮಾಡಿದ್ದು, ಎಂಬ ಬಗ್ಗೆ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada