ಮೈಸೂರು ಜಿಲ್ಲಾ ಪೊಲೀಸ್ ಹಾಗೂ ನಂಜನಗೂಡು ಸಂಚಾರಿ ಪೊಲೀಸ್ ಠಾಣಾ ವತಿಯಿಂದ ಇಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಿಂದ ಹೊರಟ ಜಾಥಾ.ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.ಸಂಚಾರಿ ಪೊಲೀಸ್ ಠಾಣಾ ಪಿಎಸ್ಐ ಯಾಸ್ಮಿನ್ ತಾಜ್ ಜಾಥಾಕ್ಕೆ ಚಾಲನೆ ನೀಡಿದರು.ವಿವಿಧಘೋಷಣಾ ಪಲಕಗಳನ್ನಿಡಿದು ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಅರಿವು ಮೂಡಿ ಸುತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾವು ಸಾಗಿತು.ಬಳಿಕ ಪಿಎಸ್ಐ ಯಾಸ್ಮಿನ್ ತಾಜ್ ಮಾತನಾಡಿ ಸಂಚಾರಿ ನಿಯಮ ಪಾಲಿಸಿ ಅಪರಾಧ ತಡೆಯುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.ಶಾಲಾ ಮಕ್ಕಳು, ಶಿಕ್ಷಕರು, ಪೊಲೀಸರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada