ಚಿತ್ರರಂಗದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಟಿ ರಶ್ಮಿಕಾ ಮಂದಣ್ಣ.

 

ಚಿತ್ರರಂಗದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಟಿ ರಶ್ಮಿಕಾ ಮಂದಣ್ಣ. ಕಡಿಮೆ ಅವಧಿಯಲ್ಲಿ ಅವರು ಸ್ಯಾಂಡಲ್‌ವುಡ್‌ನಿಂದ ಈಗ ಬಾಲಿವುಡ್‌ಗೆ ಹಾರಿದ್ದಾರೆ. ಅಲ್ಲಿಯೇ ನೆಲೆ ನಿಲ್ಲುವ ಸೂಚನೆಗಳನ್ನು ನೀಡಿದ್ದಾರೆ. ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳನ್ನು ನೀಡುತ್ತಾ, ವಿಜಯ್, ಅಮಿತಾಬ್ ಬಚ್ಚನ್, ಅಲ್ಲು ಅರ್ಜುನ್, ಇದೀಗ ರಣ್ಬೀರ್ ಕಪೂರ್ ಅವರಂಥಹಾ ಸ್ಟಾರ್ ನಟರೊಟ್ಟಿಗೆ ನಟಿಸುವ ಅವಕಾಶ ಬಾಚಿಕೊಳ್ಳುತ್ತಿರುವ ರಶ್ಮಿಕಾರಿಗೆ ಶ್ರಮದ ಜೊತೆಗೆ ಅದೃಷ್ಟವೂ ಜೊತೆಗೆ ನಿಂತಿದೆ. ರಶ್ಮಿಕಾ ಮಂದಣ್ಣ ದೊಡ್ಡ ಯಶಸ್ಸನ್ನು ಗಳಿಸುತ್ತಿರುವ ಬೆನ್ನಲ್ಲೆ ಪದೇ -ಪದೇ ವಿವಾದಕ್ಕೂ ಒಳಗಾಗುತ್ತಿರುತ್ತಾರೆ. ಅವರ ಮಾತು, ವರ್ತನೆ ಇನ್ನಿತರೆ ವಿಚಾರಗಳ ಬಗ್ಗೆ ಆಗಾಗ್ಗೆ ಟೀಕೆಗಳು ಕೇಳಿ ಬರುತ್ತಲೇ ಇರುತ್ತವೆ. ಈ ರೀತಿ ಆಗುತ್ತಿರುವುದೇಕೆ ಎಂಬ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಹೌದು, ನನ್ನ ಹೆಸರು ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸಿಲುಕಿಕೊಂಡಿರುತ್ತದೆ ಎಂದಿರುವ ರಶ್ಮಿಕಾ, ಇದಕ್ಕೆ ಮುಖ್ಯ ಕಾರಣ, ನನಗೆ ಸರಿಯಾಗಿ ಸಂಹವನ ಮಾಡಲು ಅಥವಾ ತಾನು ಅಂದುಕೊಂಡಿದ್ದನ್ನು ಸರಿಯಾದ ರೀತಿಯಲ್ಲಿ ಹೇಳಲು ಬರದೇ ಇರುವುದೇ ಕಾರಣ ಎಂದಿದ್ದಾರೆ. ನಾನು ಅಂದುಕೊಂಡಿರುವ ವಿಷಯವನ್ನು ಸರಿಯಾಗಿ ಎದುರಿರುವವರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ ಇದರಿಂದ ಹೆಚ್ಚು ವಿವಾದಗಳಾಗುತ್ತಿವೆ” ಎಂದಿದ್ದಾರೆ. ನನಗೆ ಸರಿಯಾಗಿ ಮಾತನಾಡಲು ಬರುವುದಿಲ್ಲ: ರಶ್ಮಿಕಾ ”ಕನ್ನಡ, ತೆಲುಗು, ತಮಿಳಿನಲ್ಲಿ ಅದ್ಭುತವಾದ ಹಾಡುಗಳಿವೆ. ನನ್ನ ಸಿನಿಮಾದಲ್ಲಿಯೇ ಎಷ್ಟೋ ಸುಮಧುರವಾದ ಹಾಡುಗಳಿವೆ. ಅವನ್ನೆಲ್ಲ ಮರೆಯುವಷ್ಟು ಮೂರ್ಖಳು ನಾನಲ್ಲ” ಎಂದಿದ್ದಾರೆ ರಶ್ಮಿಕಾ. ಇದೀಗ ನಾನು ನನ್ನ ಸಂವಹಣ ಕೌಶಲವನ್ನು ಉತ್ತಮ ಪಡಿಸಿಕೊಳ್ಳುವತ್ತ ಗಮನ ಹರಿಸಿದ್ದೇನೆ” ಎಂದಿದ್ದಾರೆ. ರಶ್ಮಿಕಾ ಸಾಲು-ಸಾಲು ವಿವಾದಗಳಿಗೆ ಆಹಾರವಾಗುತ್ತಲೇ ಬರುತ್ತಿದ್ದಾರೆ. ಗುಡ್ ಬೈ ಸಿನಿಮಾದ ಸಮಯದಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಹಾಗೂ ಅವರ ನಿರ್ಮಾಣ ಸಂಸ್ಥೆಯ ಹೆಸರು ಮುಚ್ಚಿಟ್ಟು ವಿವಾದಕ್ಕೆ ಈಡಾಗಿದ್ದರು. ಬಳಿಕ ‘ಕಾಂತಾರ’ ಸಿನಿಮಾ ನೋಡಿಲ್ಲ ಎಂದು ವಿವಾದ ಸೃಷ್ಟಿಸಿಕೊಂಡಿದ್ದರು. ಪುನೀತ್ ರಾಜ್‌ಕುಮಾರ್ ನೆನಪು ಮಾಡಿಕೊಂಡ ನಟಿಇದೇ ಸಂದರ್ಶನದಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರನ್ನು ನೆನಪು ಮಾಡಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, ”ಅವರೊಟ್ಟಿಗೆ ನಟಿಸಿದಾಗ ನನಗೆ ಹಲವು ಸಲಹೆಗಳನ್ನು ಅವರು ನೀಡಿದರು. ನನ್ನೊಳಗಿನ ಪ್ರತಿಭೆಯನ್ನು ಗುರುತಿಸಿದ ಮೊದಲಿಗರಲ್ಲಿ ಅವರೂ ಒಬ್ಬರು. ನಾನು ಆಗಷ್ಟೆ ತೆಲುಗು ಚಿತ್ರರಂಗಕ್ಕೆ ಕಾಲಿಡಲಿದ್ದೆ ಆಗ ಅವರು ನನಗೆ ಕೆಲವು ಅಗತ್ಯ ಸಲಹೆಗಳನ್ನು ನೀಡಿದ್ದರು, ಹಾಗೂ ನನ್ನ ಬಗ್ಗೆ ಅವರಿಗೆ ಅಪಾರವಾದ ವಿಶ್ವಾಸವಿತ್ತು. ಅವರನ್ನು ಸದಾ ನಾನು ಮಿಸ್ ಮಾಡಿಕೊಳ್ಳುತ್ತೇನೆ” ಎಂದಿದ್ದಾರೆ ರಶ್ಮಿಕಾ ಮಂದಣ್ಣ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಧ್ಯರಾತ್ರಿ ಬೆಂಗಳೂರು ಪೊಲೀಸರ ಡೆಡ್ಲಿ ಚೇಸಿಂಗ್

Thu Jan 12 , 2023
ಚೇಸ್ ಮಾಡಿ ಕಿಡ್ನಾಪ್ ಆರೋಪಿಯ ಬಂಧನ ಆಡುಗೋಡಿ ಇನ್ಸ್ ಪೆಕ್ಟರ್ ಮಂಜುನಾಥ್ ಸಮಯ ಪ್ರಜ್ಙೆಯಿಂದ ಉಳಿತು ಒಂದು ಜೀವ ಕೋರಮಂಗಲ 100 ಫೀಟ್ ರಸ್ತೆ ಬಳಿ ಚೆಕ್ ಪೋಸ್ಟ್ ನಲ್ಲಿದ್ದ ಇನ್ಸ್ ಪೆಕ್ಟರ್ ಮಂಜುನಾಥ್ ನೈಟ್ ರೌಂಡ್ಸ್ ನಲ್ಲಿದ್ದ ಆಡುಗೋಡಿ ಇನ್ಸ್ ಪೆಕ್ಟರ್ ಮಂಜುನಾಥ್ ಈ ವೇಳೆ ಬಂದ ಹೋಂಡಾ ಸಿಟಿ ಕಾರ್ ಬ್ಯಾರಿಕೇಡ್ ಗೆ ಗುದ್ದಿತ್ತು ರಾತ್ರಿ 11.40 ರ ಸುಮಾರಿಗೆ ನಡೆದ ಘಟನೆ ಕಾರಿನಲ್ಲಿದ್ದ ಓರ್ವ ಕಾಪಾಡಿ..ಕಾಪಾಡಿ […]

Advertisement

Wordpress Social Share Plugin powered by Ultimatelysocial