ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೂದಿಗೆರೆ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಉದಯನಗರ ನಿವಾಸಿ.ಬಿವಿನ್(18) ಕೆರೆಯಲ್ಲಿ ಮೃತಪಟ್ಟಿರುವ ವಿದ್ಯಾರ್ಥಿಯಾಗಿದ್ದಾನೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರ ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ. ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದಾರೆ. ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕಗ್ಗಲಹಳ್ಳಿಗೆ ಶ್ರೀ ಶನಿಮಹಾತ್ಮ ದೇವಾಲಯಕ್ಕೆ ವಿದ್ಯಾರ್ಥಿಗಳು ಬಂದಿದ್ದರು. ಕೆರೆ ಬಳಿ ಚಿಕನ್ ತಯಾರಿಸಿಕೊಂಡು ತಿಂದು, ನಂತ್ರ ಈಜಲು ವಿದ್ಯಾರ್ಥಿಗಳು ಮುಂದಾದರು. ಕೆರೆ ಕೊಡಿ ಬಿದ್ದ ನಂತರ ಬೂದಿಗೆರೆ ಕೆರೆಯಲ್ಲಿ ಎರಡನೇ ಸಾವಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada