ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಅಜೀತ ಬಾನೆ ಶಾಲೆ ಶಿಕ್ಷಕರು ವಿದ್ಯಾರ್ಥಿಗಳ ಸಹಯೋಗದೂಂದಿಗೆ 112ಸೇವಾ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಸಲಾಯಿತು. ಕುಡಚಿ ಪಿಎಸ್ಐ ಶಿವರಾಜ್ ಧರಿಗೊಂಡ ಮಾತನಾಡಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡಬೇಕು ಹಾಗೂ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಇನ್ನು ಅಜೀತ ಬಾನೆ ಶಾಲೆಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಮಾಡುವ ಮೂಲಕ ಸೇವೆಗಳ ಬಗ್ಗೆ ಜಾಗೃತಿ ಮೂಡಿಸಿದರು ಹೆಲ್ಮೆಟ ಧರಿಸಿ ವಾಹನ ಸವಾರರು ಮಾಡುತ್ತಿರುವವರಿಗೆ ವಿದ್ಯಾರ್ಥಿಗಳಿಂದ ಗುಲಾಬಿ ಹೂವು ನೀಡುವುದರ ಮೂಲಕ ಉತ್ತೇಜನ ನೀಡಿದರು. ಪೋಲಿಸ್ ಇಲಾಖೆಯಿಂದ 112 ತುರ್ತು ಸೇವೆ ವಾಹನ ನಿಮ್ಮ ಅನುಕೂಲಕ್ಕೆ ಸರ್ಕಾರ ಯೋಜನೆ ತಂದಿದೆ ಎಂದು ಹೇಳಿದರು.
ಇದನ್ನೂ ಓದಿ :ಬಾಲಕಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಬೈಕ್ ಸವಾರ