ವಿದ್ಯಾರ್ಥಿಯೊರ್ವ ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಹದೇವಪುರದಲ್ಲಿ ನಡೆದಿದೆ. ಕೃಪಾನಿಧಿ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ಆಂಧ್ರ ಮೂಲದ ಯುವಕ ಮೋಕ್ಷಗ್ನ್ಯ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಯುವಕ .
ಕಳೆದ ನಾಲ್ಕು ದಿನಗಳಿಂದ ಆಂಧ್ರದಲ್ಲಿದ್ದ ಪೋಷಕರಿಗೆ ಯುವಕ ಫೋನ್ ಮಾಡಿ ಮಾತನಾಡಿಲ್ಲ. ಈ ಬಗ್ಗೆ ಅನುಮಾನ ಬಂದು ಪೋಷಕರು ಕಾಲೇಜಿಗೆ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮಗ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಪೊಲೀಸರ ಬಲೆಯಲ್ಲಿ ಸಿನಿಮಾ ಲೀಕಾಸುರ