ಕೋಲಾರವನ್ನು ಗೆಲ್ಲಲು ನಾವು ಪಣ ತೊಟ್ಟಿದ್ದೇವೆ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಹಲವು ಟೀಕೆಗಳಿಗೆ ಕಾರಣವಾಗಿದೆ.ಇದೀಗ ಈ ಕುರಿತು ಸಚಿವ ಡಾ,ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ರಾಜಕೀಯ ತೀರ್ಮಾನ ಅವರಿಗೆ ಮಾರಕವಾಗಬಹುದು, ಜಿಲ್ಲೆಗಳ ಇತರ ಕ್ಷೇತ್ರಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.ಕೋಲಾರಕ್ಕೂ ಅವರಿಗೂ ಯಾವುದೇ ರೀತಿಯ ವಿಶೇಷ ಸಂಬಂಧ ಇಲ್ಲ. ಅಲ್ಪಸಂಖ್ಯಾತ ಮತಗಳು ಮತ್ತು ಇತರೆ ಹಲವು ಜಾತಿಗಳ ಮತಗಳ ಲೆಕ್ಕಾಚಾರದಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿರ್ಸಲು ತೀರ್ಮಾನಿಸಿದ್ದಾರೆ ಎಂದರು.ಕೋಲಾರದಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಬೇಕಾದ ವ್ಯೂಹ ನಾವು ಮಾಡುತ್ತೇವೆ , ಕೋಲಾರವನ್ನು ಗೆಲ್ಲಲು ನಾವು ಪಣ ತೊಟ್ಟಿದ್ದೇವೆ ಎಂದು ಸುಧಾಕರ್ ಹೇಳಿದರು.ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಇತ್ತ ಸಿದ್ದರಾಮಯ್ಯನವರು ತಮಗೆ ಕೈ ಹಿಡಿದ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದಿದ್ದರು., ಇದೀಗ ಸದ್ಯ ಕೋಲಾರದ ಕಡೆ ಮುಖಮಾಡಿರುವ ಸಿದ್ದರಾಮಯ್ಯ ಈ ಬಾರಿ ಅಲ್ಲಿಂದಲೇ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ.

Wed Jan 11 , 2023
ಹೊಸದಿಲ್ಲಿ: ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲಿ ನೆಲೆಸಿರುವ ಆರೋಪದಲ್ಲಿ ಬಂಧಿಸಲಾಗಿದ್ದ ನೈಜೀರಿಯಾ ಪ್ರಜೆಗಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವ ವೇಳೆ ಗುಂಪುಗೂಡಿದ ನೂರಾರು ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಬಂಧಿತರನ್ನು ಬಿಡುಗಡೆ ಮಾಡಿದ ಘಟನೆ ದಕ್ಷಿಣ ದಿಲ್ಲಿಯ ನೆಬ್ ಸರೈ ಪ್ರದೇಶದಲ್ಲಿ ಶನಿವಾರ ನಡೆದಿದೆ. ದಿಲ್ಲಿನ ಮಾದಕವಸ್ತು ನಿಗ್ರಹ ಘಟಕದ ಪೊಲೀಸರು, ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಉಳಿದುಕೊಂಡಿರುವ ನೈಜೀರಿಯಾದ ಮೂವರು ಪ್ರಜೆಗಳನ್ನು ಶನಿವಾರ […]

Advertisement

Wordpress Social Share Plugin powered by Ultimatelysocial