24 ಗಂಟೆಗಳಲ್ಲಿ ರಾಜ್ಯದಲ್ಲಿ 191 ಕರೊನಾ ಕೇಸ್‌:

 

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 191 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,854ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಕೋವಿಡ್‌ನಿಂದ ಯಾರೂ ಮೃತಪಟ್ಟಿಲ್ಲ.

138 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 11,380 ಕೋವಿಡ್ ಟೆಸ್ಟ್ ನಡೆಸಲಾಗಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.61ರಷ್ಟಿದ್ದು, ಬೆಂಗಳೂರು ನಗರದಲ್ಲಿ 171 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,763 ಇದೆ. ಮೈಸೂರಲ್ಲಿ 14, ದಕ್ಷಿಣ ಕನ್ನಡದಲ್ಲಿ 2 ಪ್ರಕರಣಗಳು ಕಂಡುಬಂದಿವೆ. ಚಿತ್ರದುರ್ಗ, ತುಮಕೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.

ಇದುವರೆಗೆ ರಾಜ್ಯದಲ್ಲಿ 39.48 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 40,060 ಮಂದಿ ಮೃತರಾಗಿದ್ದಾರೆ. ಮೇ 5ರಂದು 138 ಜನರು ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 39.06 ಲಕ್ಷಕ್ಕೆ ಏರಿಕೆಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇದಾರನಾಥ ನೋಡಲು ಇಂದಿನಿಂದ ಅವಕಾಶ:

Fri May 6 , 2022
  ಕೇದರನಾಥ ಮೇ 6: ಆರು ತಿಂಗಳ ಚಳಿಗಾಲದ ಅವಧಿಯ ನಂತರ ಇಂದು ಬೆಳಗ್ಗೆ ಐದು ಗಂಟೆಗೆ ವಿಶ್ವಪ್ರಸಿದ್ಧ ಕೇದಾರನಾಥದ ಬಾಗಿಲು ತೆರೆಯಲಾಗಿದೆ. ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ಧಾಮದ ಬಾಗಿಲುಗಳು ಮೇ 6ರಿಂದ ತೆರೆಯಲಿವೆ. ಚಾರ್ ಧಾಮ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬದ್ರಿನಾಥ, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದ್ವಾರಗಳನ್ನು ಆರು ತಿಂಗಳ ಚಳಿಗಾಲದ ನಂತರ ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಭಕ್ತರಿಗೆ ಪ್ರವೇಶ ಪಡೆಯಲು ಅವಕಾಶವನ್ನು […]

Advertisement

Wordpress Social Share Plugin powered by Ultimatelysocial