ಈ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಖಂಡಿತಾ ಸ್ಥಾನವಿದೆ

ಈ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಖಂಡಿತಾ ಸ್ಥಾನವಿದೆ: ಪ್ರತಿಭಾನ್ವಿತ ಆಟಗಾರನ ಬಗ್ಗೆ ಬಂಗಾರ್ ವಿಶ್ವಾಸ

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಈವರೆಗೆ ಟೆಸ್ಟ್ ಸರಣಿ ಗೆಲ್ಲಲು ವಿಫಲವಾಗಿರುವ ಭಾರತೀಯ ತಂಡ ಈ ಬಾರಿ ಆ ಕೆಟ್ಟ ದಾಖಲೆಯನ್ನು ಅಳಿಸಿಹಾಕುವ ಆತ್ಮವಿಶ್ವಾಸದಲ್ಲಿದೆ.

ಹೀಗಾಗಿ ಆಡುವ ಬಳಗದ ಸಂಯೋಜನೆ ಸಾಕಷ್ಟು ಕುತೂಹಲಕಾರಿಯಾಗಿದೆ. 18 ಮಂದಿ ಆಟಗಾರರ ಸ್ಕ್ವಾಡ್‌ನಲ್ಲಿ ಅಂತಿಮ 11ರ ಬಳಗದ ಆಯ್ಕೆ ಮ್ಯಾನೇಜ್‌ಮೆಂಟ್ ಪಾಲಿಗೆ ಸವಾಲಾಗಿದ್ದರೂ ಪ್ರತಿಭಾನ್ವಿತ ಆಟಗಾರರೇ ತುಂಬಿರುವುದರಿಂದಾಗಿ ದಕ್ಷಿಣ ಆಫ್ರಿಕಾದ ಸವಾಲನ್ನು ಭಾರತ ದಿಟ್ಟವಾಗಿ ಎದುರಿಸುವ ವಿಶ್ವಾಸದಲ್ಲಿದೆ.

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಈ ಆಟಗಾರ ಖಂಡಿತವಾಗಿಯೂ ಸ್ಥಾನವನ್ನು ಪಡೆಯುತ್ತಾರೆ ಎಂಬ ವಿಶ್ವಾಸವನ್ನು ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ವ್ಯಕ್ತಪಡಿಸಿದ್ದಾರೆ. ಸಂಜಯ್ ಬಂಗಾರ್ ಹೀಗೆ ಆತ್ಮ ವಿಶ್ವಾಸದಿಂದ ಮಾತನಾಡಿದ್ದು ಶಾರ್ದೂಲ್ ಠಾಕೂರ್ ಬಗ್ಗೆ.

ದಕ್ಷಿಣ ಆಫ್ರಿಕಾಗೆ ಟೆಸ್ಟ್ ಸರಣಿಗಾಗಿ ಪ್ರವಾಸಕೈಗೊಂಡಿರುವ ಭಾರತೀಯ ತಂಡದಲ್ಲಿರುವ 18 ಸದಸ್ಯರ ಪೈಕಿ ಆರು ವೇಗಿಗಳಿದ್ದಾರೆ. ಅದರೆ ಬ್ಯಾಟಿಂಗ್‌ನಲ್ಲಿಯೂ ಕೊಡುಗೆ ನೀಡಬಲ್ಲ ವೇಗಿ ಅಂದರೆ ಅದು ಶಾರ್ದೂಲ್ ಠಾಕೂರ್ ಮಾತ್ರ ಎಂಬುದು ಗಮನಾರ್ಹ ಸಂಗತಿ.

Please follow and like us:

Leave a Reply

Your email address will not be published. Required fields are marked *

Next Post

ಭಾರತವೇ ಗುರಿ, ಪಾಕ್‌ನಿಂದಲೇ ಮುಂದುವರಿದ ಉಗ್ರ ಸಂಘಟನೆಗಳ ಕಾರ್ಯಾಚರಣೆ

Fri Dec 17 , 2021
ವಾಷಿಂಗ್ಟನ್‌: ಭಾರತವನ್ನು ಗುರಿಯಾಗಿಸಿಕೊಂಡಿರುವ ಭಯೋತ್ಪಾದನಾ ಸಂಘಟನೆಗಳು ಪಾಕಿಸ್ತಾನದಿಂದಲೇ ಕಾರ್ಯಾಚರಣೆ ಮುಂದುವರಿಸಿವೆ. ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಿಸಿರುವ ಮಸೂದ್ ಅಜರ್‌ ಸೇರಿದಂತೆ ಹಲವು ಉಗ್ರರ ವಿರುದ್ಧವೂ ಪಾಕಿಸ್ತಾನ ಆಡಳಿತವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆಯು ಇತ್ತೀಚಿನ ವರದಿಯಲ್ಲಿ ಉಲ್ಲೇಖಿಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೊನಿ ಬ್ಲಿಂಕನ್‌ ಭಯೋತ್ಪಾದನೆಗೆ ಸಂಬಂಧಿಸಿದ 2020ರ ವರದಿಯನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ. ವರದಿಯ ಪ್ರಕಾರ, ‘ಅಫ್ಗಾನಿಸ್ತಾನವನ್ನು ಗುರಿಯಾಗಿಸಿಕೊಂಡಿರುವ ಆಫ್ಗನ್‌ ತಾಲಿಬಾನ್‌ ಹಾಗೂ […]

Advertisement

Wordpress Social Share Plugin powered by Ultimatelysocial