ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್..!!

ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ಜೊತೆಗೆ ಹೆಚ್ಚುವರಿಗಾಗಿ 150 ರೂಪಾಯಿ ನೀಡಲು ಸರ್ಕಾರ ಆದೇಶಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 39 ದಿನಗಳಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಶುಕ್ರವಾರ ಸ್ಥಗಿತಗೊಳಿಸಲಾಗಿದೆ.ಕಬ್ಬು ಪೂರೈಕೆ ಮಾಡಿದ ರೈತರಿಗೆ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ಜೊತೆಗೆ ಪ್ರತಿ ಟನ್ ಗೆ 100 ರೂಪಾಯಿ ಹೆಚ್ಚುವರಿ ಹಣ ಕೊಡಬೇಕು. ಎಥೆನಾಲ್ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳು 50 ರೂಪಾಯಿ ಹೆಚ್ಚುವರಿ ಕೊಡಬೇಕು ಎಂದು ಆದೇಶಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಕಬ್ಬು ಅರೆಯುವ ಹಂಗಾಮು ಮುಗಿದ ನಂತರ ಸಕ್ಕರೆ, ಎಥೆನಾಲ್ ಮತ್ತು ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಬರುವ ಅಂತಿಮ ಆದಾಯವನ್ನು ಹಂಚಿಕೆ ಸೂತ್ರದ ಪ್ರಕಾರ ಪರಿಗಣಿಸಿ ಅಂತಿಮ ಕಬ್ಬಿನ ದರ ನಿರ್ಧರಿಸಲಾಗುವುದು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು 39 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದಾರೆ. ಬಾಕಿ ಇರುವ ಸಮಸ್ಯೆಗಳು ಬೇಡಿಕೆಗಳನ್ನು ಈಡೇರಿಸಲು ಒಂದು ತಿಂಗಳು ಗಡುವು ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಹದಲ್ಲಿ ಜಿಂಕ್‌ (ಸತು) ಹೆಚ್ಚಾದರೆ ಕಂಡು ಬರುವ ಸಮಸ್ಯೆಗಳಿವು

Sat Dec 31 , 2022
ಸತುವಿಂಶ ಆರೋಗ್ಯಕ್ಕೆ ತುಂಬಾನೇ ಅವಶ್ಯಕ. ಆದರೆ ಸತುವಿನಂಶ ಕಡಿಮೆಯಾದರೆ ಹೇಗೆ ಆರೋಗ್ಯಕ್ಕೆ ತೊಂದರೆಯಾಗುವುದೋ ಅದೇ ರೀತಿ ಸತುವಿನಂಶ ಅಧಿಕವಾದರೆ ಕೂಡ ತೊಂದರೆಯಾಗುವುದು. ಕೆಲವರು ಸತುವಿನಂಶ ಸಪ್ಲಿಮೆಂಟ್ಸ್‌ ತೆಗೆದುಕೊಳ್ಳುತ್ತಾರೆ.ಸತುವಿನಂಶದ ಸಪ್ಲಿಮೆಂಟ್ಸ್‌ ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಮೊಡವೆ ಸಮಸ್ಯೆ ನಿವಾರಿಸಲು, ಮಧುಮೇಹ ನಿಯಂತ್ರಣದಲ್ಲಿಡಲು ಸಹಕಾರಿ.ಆದರೆ ಸತುವಿಂಶ ಸಪ್ಲಿಮೆಂಟ್ಸ್ ವೈದ್ಯರ ಸಲಹೆಯಿಲ್ಲದೆ ಪಡೆಯಬಾರದು.ಇನ್ನು ನೀವು ಅಧಿಕ ಸತುವಿನಂಶ ಆಹಾರ ತೆಗೆದುಕೊಂಡಾಗ ಅಥವಾ ಸತುವಿನಂಶ ಸಪ್ಲಿಮೆಂಟ್ಸ್ ಡೋಸೇಜ್ ಅಧಿಕವಾದರೆ ಕೆಲವು ತೊಂದರೆಗಳು ಉಂಟಾಗುವುದು. ನೀವು […]

Advertisement

Wordpress Social Share Plugin powered by Ultimatelysocial