ಮುಹೂರ್ತದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯ.

 

ಚಿತ್ರೀಕರಣ ಆರಂಭದ ದಿನದಿಂದಲ್ಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಇತ್ತೀಚೆಗೆ ನೆಲಮಂಗಲದ ಬಳಿಯ ಅಂಕಿತ್ ವಿಸ್ತಾದಲ್ಲಿ ಕೊನೆಯ ಸನ್ನಿವೇಶವನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ದೀಪಕ್ ಅರಸ್ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆದಿದ್ದಾರೆ. ಚಿತ್ರೀಕರಣ ಮುಕ್ತಾಯ ದಿನದ ಸಂಭ್ರಮವನ್ನು ಚಿತ್ರತಂಡ ಸಂತಸದಿಂದ ಆಚರಿಸಿದೆ.

ಗೋವಾ, ಬೆಂಗಳೂರು, ಮೈಸೂರು ಹಾಗೂ ಕಜಾಕಿಸ್ಥಾನದಲ್ಲಿ ‍55 ದಿನಗಳ ಚಿತ್ರೀಕರಣ ನಡೆದಿದೆ. ಅದ್ದೂರಿ ಸೆಟ್ ಗಳು ಈ ಚಿತ್ರದ ಪ್ರಮುಖ ಆಕರ್ಷಣೆ.

ವಿಭಿನ್ನ ಪೋಸ್ಟರ್, ವಿನೂತನ ಪ್ರಚಾರದ ಮೂಲಕ “ಶುಗರ್ ಫ್ಯಾಕ್ಟರಿ” ಈಗಾಗಲ್ಲೇ ಸಿನಿರಸಿಕರಲ್ಲಿ ಕುತೂಹಲ ಹುಟ್ಟಿಸಿದೆ‌. “ಶುಗರ್ ಫ್ಯಾಕ್ಟರಿ” ಹೇಗಿರಬಹುದೆಂಬ? ಕೌತುಕ ಎಲ್ಲರಲ್ಲೂ ಮನೆಮಾಡಿದೆ. ಚಿತ್ರ ತೆರೆಯ ಮೇಲೆ ನೋಡುವ ಕಾತುರ ಹೆಚ್ಚಾಗಿದೆ.

ಚಿತ್ರೀಕರಣ ಮುಕ್ತಾಯವಾದ ಬೆನ್ನಲ್ಲೇ ಸಂಗೀತ ನಿರ್ದೇಶಕ ಕಬೀರ್ ರಫಿ “ಶುಗರ್ ಫ್ಯಾಕ್ಟರಿ” ಯನ್ನು ರೀರೆಕಾರ್ಡಿಂಗ್ ನಿಂದ ಶೃಂಗಾರಿಸುತ್ತಿದ್ದಾರೆ.

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿದ್ದು, ಸೋನಾಲ್ ಮಾಂಟೆರೊ, ಶಿಲ್ಪಾ ಶೆಟ್ಟಿ ಹಾಗೂ ಅದ್ವಿತಿ ಶೆಟ್ಟಿ ಮೂವರು “ಶುಗರ್ ಫ್ಯಾಕ್ಟರಿ” ಯ ನಾಯಕಿಯರು. ರಂಗಾಯಣ ರಘು, ಗೋವಿಂದೇ ಗೌಡ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು

ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್ ಅವರು ನಿರ್ಮಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಾರ ಹಂಗಿಲ್ಲದ ಪೂರ್ಣ ಸರಕಾರ ನೀಡಿದರೆ ಸಮಗ್ರ ನೀರಾವರಿ ಜನತಾ ಜಲಧಾರೆ ಮಹಾ ಸಂಕಲ್ಪ ಸಮಾವೇಶ ಹೆಚ್.ಡಿ.ಕುಮಾರಸ್ವಾಮಿ!

Sat May 14 , 2022
ಬೆಂಗಳೂರು : ಮೈತ್ರಿ ಸರ್ಕಾರದ ಸಹವಾಸ ಬೇಡ ಬದಲಾಗಿ ಸ್ವತಂತ್ರ ಸರ್ಕಾರ ತರಲು ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ನೆಲಮಂಗಲ ಸಮೀಪ ಇಂದು ಹಮ್ಮಿಕೊಂಡಿದ್ದ ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೂನ್, ಜುಲೈ ತಿಂಗಳಲ್ಲಿ ಮತ್ತೊಂದು ಸುತ್ತಿನ ರಥಯಾತ್ರೆ ನಡೆಸುತ್ತೇನೆ ಎಂದು ಘೋಷಿಸಿದರು. ಹಳ್ಳಿ, ಹಳ್ಳಿಗಳಲ್ಲಿ ರಥಯಾತ್ರೆ ನಡೆಸುತ್ತೇವೆ. ನಾನೇ ಜನರ ಮುಂದೆ ಬರುತ್ತೇನೆ ಎಂದರು. ನಮ್ಮ ಪಕ್ಷದಿಂದಲೇ ಬೆಳೆದು […]

Advertisement

Wordpress Social Share Plugin powered by Ultimatelysocial