ಆತ್ಮಹತ್ಯತೆಗೆ ಶರಣಾಗಿರುವ ಶಶಿಕಲಾ

ಪ್ರೀತಿಸುವ ವಿಚಾರದಲ್ಲಿ ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದ ಯುವತಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯತೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಣಸೆಗಟ್ಟೆಪಾಳ್ಯ ಗ್ರಾಮದಲ್ಲಿ ನಡೆದಿದೆ.ಶಶಿಕಲಾ (23) ಮನೆಯಲ್ಲಿ ನೇಣಿಗೆ ಶರಣಾದ ಯುವತಿಯಾಗಿದ್ದು, ಮೃತ ಶಶಿಕಲಾ ಹಲವಾರು ತಿಂಗಳಿಂದ ಬೆಂಗಳೂರು ಮೂಲದ ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು. ಆದರೆ ಇವರಿಬ್ಬರ ಪ್ರೀತಿ ವಿಚಾರದಲ್ಲಿ ತಡರಾತ್ರಿ ಮನೆಯವರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಮನನೊಂದು ಶಶಿಕಲಾ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ

Please follow and like us:

Leave a Reply

Your email address will not be published. Required fields are marked *

Next Post

ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

Sat Feb 13 , 2021
ಅಪರಿಚಿತ ಮಹಿಳೆಯ ಶವ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಅಯ್ಯನ ಕೆರೆಯಲ್ಲಿ ಪತ್ತೆಯಾಗಿದೆ.ಸುಮಾರು 55- 60 ವಯಸ್ಸಿನ ಮಹಿಳೆಯ ಅನುಮಾನಾಸ್ಪದವಾಗಿ ಸಾವನ್ನಪಿದ್ದಾರೆ.ಕಡೂರಿನಿಂದ ಸಖರಾಯಪಟ್ಟಣಕ್ಕೆ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳೆ ಬಂದಿದ್ದು, ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.ಶವದ ಬಳಿ ಮಂಗಲ್ ದೀಪ್ ಶೋ ರೂಂ ಪರ್ಸ್ ಪತ್ತೆಯಾಗಿದೆ.ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ :ಆತ್ಮಹತ್ಯತೆಗೆ ಶರಣಾಗಿರುವ ಶಶಿಕಲಾ Please follow […]

Advertisement

Wordpress Social Share Plugin powered by Ultimatelysocial