ಸಾಲಕ್ಕೆ ಹೆದರಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಾಮರಾಜನಗರದಲ್ಲಿ ಸಾಲಭಾದೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ರಂಗೂಪುರ ಗ್ರಾಮದಲ್ಲಿ ಮಹದೇವೇಗೌಡ (50) ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟವರು.ಮಹದೇವೇಗೌಡ ರಂಗೂಪುರದ ಪಿಎಸಿಸಿ ಬ್ಯಾಂಕ್, ಸ್ವ ಸಹಾಯ ಸಂಘ ಸೇರಿದಂತೆ ಹಲವೆಡೆ ಮೂರು ಲಕ್ಷ ರೂ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇನ್ನೂ ಪ್ರಕರಣ ದಾಖಲಾಗಿಲ್ಲ ಬೆಳಗೋಡು ಹೋಬಳಿ ಕುನಿಗನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡೂರು ಗ್ರಾಮದಲ್ಲಿ ರೈತ ಹೊನ್ನಪ್ಪ (58) ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದು, ರಾಷ್ಟ್ರೀಕೃತ ಬ್ಯಾಂಕಿನಲ್ಲಿ 3 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು ಹಾಗೂ ಸ್ಥಳೀಯವಾಗಿ 8 ಲಕ್ಷ ಸಾಲವನ್ನು ಮಾಡಿಕೊಂಡಿದ್ದರು ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ

Fri Jan 6 , 2023
  ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ (Fire accident) ಕಾಣಿಸಿಕೊಂಡು ಅಪಾಯದ ಸನ್ನಿವೇಶ ನಿರ್ಮಾಣವಾಯಿತು. ಆದರೆ, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ ತಪ್ಪಿತು.ಇದು ಗುಜರಾತ್ ನಿಂದ ಬಂದಿದ್ದ ಪ್ರವಾಸಿಗರನ್ನು ಹೊತ್ತು ಚಾಮುಂಡಿ ಬೆಟ್ಟಕ್ಕೆ ಸಾಗುತ್ತಿದ್ದ ಬಸ್‌. ಬೆಳಗ್ಗೆ ಸುಮಾರು ೫೦ರಷ್ಟು ಪ್ರಯಾಣಿಕರನ್ನು ಹೊತ್ತು ಅದು ಚಾಮುಂಡಿ ಬೆಟ್ಟದ ಕಡೆಗೆ ಹೊಗುತ್ತಿತ್ತು. ಆಗ ಬಸ್‌ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿತು.ಚಾಮುಂಡಿಬೆಟ್ಟ ಬಸ್ ನಿಲ್ದಾಣದ ಸಮೀಪ […]

Advertisement

Wordpress Social Share Plugin powered by Ultimatelysocial