ಬೇಡದ ವಿಷಯಕ್ಕೆ ವಿಶ್ವದಾದ್ಯಂತ ಕರ್ನಾಟಕವನ್ನು ಚರ್ಚೆಗೀಡು ಮಾಡುವಂತೆ ಮಾಡಿದೆ.

ಕರ್ನಾಟಕ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯಲ್ಲಿದೆ. ಬೇಡದ ವಿಷಯಕ್ಕೆ ವಿಶ್ವದಾದ್ಯಂತ ಕರ್ನಾಟಕವನ್ನು ಚರ್ಚೆಗೀಡು ಮಾಡುವಂತೆ ಮಾಡಿದೆ. ಅದಕ್ಕೆ ಕಾರಣ ಮತ್ತೀನೇನು ಅಲ್ಲ ‘ವಸ್ತ್ರ ರಾಜಕಾರಣ’. ಈ ದೇಶದಲ್ಲಿ ಯಾವೆಲ್ಲಾ ವಿಷಯಗಳನ್ನು ಇಟ್ಟುಕೊಂಡು, ಯಾರನ್ನು ಬಳಸಿಕೊಂಡು ರಾಜಕೀಯ ಮಾಡಬೇಕು ಅನ್ನುವುದು ಚೆನ್ನಾಗಿ ಗೊತ್ತಿದೆ.ಅದರ ಭಾಗವೇ ಈ ಕೆಲಸಕ್ಕೆ ಬಾರದ ಹಿಜಾಬ್ Vs ಕೇಸರಿ ಶಾಲು. ಈ ಪ್ರಕರಣ ತಾರಕ್ಕೇರಿದೆ. ಸ್ಥಳೀಯ ಮಟ್ಟದಿಂದ ಹಿಡಿದು ಅಂತರಾಷ್ಟ್ರೀಯ ಮಟ್ಟದ ವರೆಗೂ ಈ ಹಿಜಾಬ್ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲಾಗುತ್ತಿದೆ.ಹಿಜಾಬ್ ಪ್ರಕರಣ ಕರ್ನಾಟಕ ರಾಜ್ಯದಲ್ಲಿ ಶಾಂತಿ ಕದಡಿದೆ. ಎರಡು ಧರ್ಮಗಳ ನಡುವೆ ವಿಷ ಬೀಜವನ್ನು ಬಿತ್ತಿದೆ. ರಾಜಕೀಯ ದಾಳಕ್ಕೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಕೆಲವು ದಿನಗಳಿಂದ ಹೊತ್ತಿ ಉರಿಯುತ್ತಿರುವ ಈ ಹಿಜಾಬ್ ಪ್ರಕರಣದ ಬಗ್ಗೆ ನವದೆಹಲಿಯಲ್ಲಿ ಮಂಡ್ಯ ಲೋಕಸಭೆಯ ಸದಸ್ಯೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಸುಮಲತಾ ಏನು ಹೇಳಿದ್ದಾರೆಹಿಜಾಬ್ ಪ್ರಕರಣ ದಿನದಿಂದ ದಿನಕ್ಕೆ ಚರ್ಚೆಯಾಗುತ್ತಿದೆ. ಪ್ರತಿಭಟನೆಯಿಂದ ಆರಂಭವಾಗಿದ್ದ ಈ ಪ್ರಕರಣ ಈಗ ಹಿಂಸಾಚಾರಕ್ಕೆ ತಿರುಗಿದೆ. ಒಂದು ನಗರದಿಂದ ಆರಂಭ ಆಗಿದ್ದು, ಇಡೀ ದೇಶದೆಲ್ಲಡೆ ಹರಡುತ್ತಿದೆ. ಕೆಲವೇ ದಿನಗಳಲ್ಲಿ ಇಷ್ಟೊಂದು ವ್ಯಪಕವಾಗಿ ಹರಡುತ್ತಿರುವ ಹಿಜಾಬ್ ಪ್ರಕರಣದ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಸುಮಲತಾ ಮುಗ್ಧ ಮಕ್ಕಳಲ್ಲಿ ರಾಜಕೀಯ ವಿಷ ಬಿತ್ತಲಾಗುತ್ತಿದೆ ಎಂದು ಹೇಳಿದ್ದಾರೆ.ಸುಮಲತಾ ಎಎನ್‌ಐಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಹಿಜಾಬ್ ಪ್ರಕರಣ ಆರಂಭ ಆಗಲು ರಾಜಕೀಯದ ಪಾತ್ರ ಬಹಳ ದೊಡ್ಡದಿದೆ ಎಂದು ಹೇಳಿದ್ದಾರೆ. “ಈ ಪ್ರಕರಣದಲ್ಲಿ ರಾಜಕೀಯ ಪ್ರಮುಖ ಪಾತ್ರ ವಹಿಸಿದೆ ಎಂದು ಅನಿಸುತ್ತಿದೆ. ಮುಗ್ಧ ಮಕ್ಕಳಲ್ಲಿ ವಿಷ ಬಿತ್ತಲು ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ. ನನಗೆ ಈ ಪ್ರಕರಣದಲ್ಲಿ ಬಹಳಷ್ಟು ರಾಜಕೀಯವಿರುವುದು ಎದ್ದು ಕಾಣುತ್ತಿದೆ. ” ಎಂದು ಯಾವುದೇ ರಾಜಕೀಯ ಪಕ್ಷದ ಕಡೆ ಬೊಟ್ಟು ಮಾಡದೆ ಪ್ರತಿಕ್ರಿಯೆ ನೀಡಿದ್ದಾರೆ.ಪ್ರಿಯಾಂಕಾ ಗಾಂಧಿ ಬಗ್ಗೆ ಸುಮಲತಾ ಹೇಳಿದ್ದೇನು ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ತಮಗೆ ಬೇಕಾದ ವಸ್ತ್ರ ತೊಡುವುದು ನಮ್ಮ ಹಕ್ಕು ಎಂದು ಹೇಳಿದ್ದರು. ಈ ಹೇಳಿಕೆಗೂ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. “ನಾವೇನು ಧರಿಸಬೇಕು ಅನ್ನುವುದು ನಮ್ಮ ಹಕ್ಕು. ಇದು ಖಂಡಿತವಾಗಿಯೂ ಒಪ್ಪುವಂತಹದ್ದೇ. ಆದರೆ, ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್‌ನಲ್ಲಿ ಧರಿಸುತ್ತೀರ. ಅದನ್ನು ಸ್ಕೂಲ್‌ನಲ್ಲಿ ಬಳಸಲು ಸಾಧ್ಯವಿಲ್ಲ ಅಲ್ಲವೇ. ನೀವು ಕೆಲಸ ಮಾಡುವ ಜಾಗದಲ್ಲಿ ಜೀನ್ಸ್ ಬಳಸಲು ಸಾಧ್ಯವಿಲ್ಲ. ಅಲ್ಲಿ ನೀವು ಕಂಪನಿ ಏನು ಹೇಳುತ್ತದೆಯೋ ಅದನ್ನು ಧರಿಸಬೇಕಾಗುತ್ತೆ. ” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆಗೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.ಮಕ್ಕಳ ಭವಿಷ್ಯದ ಜೊತೆ ಕಾಣದ ಕೈಗಳಿಂದ ಆಟ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೀಗೂ ಪ್ರಪೋಸ್ ಮಾಡಬಹುದು..! ಗೆಳತಿಗೆ ಪ್ರೇಮ ನಿವೇದನೆ ಮಾಡಲು ಕೆಫೆ ಸಹಾಯ ಕೋರಿದ ವ್ಯಕ್ತಿ

Thu Feb 10 , 2022
ಸ್ಕಾಟ್ಲೆಂಡ್‍ನ ವ್ಯಕ್ತಿಯೊಬ್ಬ ತಾನು ಪ್ರೀತಿಸುತ್ತಿದ್ದ ಹುಡುಗಿಗೆ ವಿಭಿನ್ನವಾಗಿ ಮದುವೆ ಪ್ರಸ್ತಾಪ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.ಜಿಮ್ ಜಿಮ್ ಲಾರ್ಡ್ನರ್ ಎಂಬಾತ ಫುಡ್ ಬಾಕ್ಸ್‌ನಲ್ಲಿ ಬರೆದ ಸಂದೇಶದೊಂದಿಗೆ ತನ್ನ ಗೆಳತಿಗೆ ಪ್ರಪೋಸ್ ಮಾಡಿದ್ದಾನೆ.ಜಸ್ಟ್ ಈಟ್ ಮೂಲಕ ಹತ್ತಿರದ ಕೆಫೆಯಿಂದ ಸ್ಯಾಂಡ್‌ವಿಚ್ ಆರ್ಡರ್ ಮಾಡಿದ ಆತ ಈ ವಿಶೇಷ ವಿನಂತಿಯನ್ನು ಬರೆದಿದ್ದು, ಅದು ಭಾರಿ ವೈರಲ್ ಆಗಿದೆ. ಬಾಕ್ಸ್ ನ ಮೇಲೆ ನೀವು ನನ್ನನ್ನು ಮದುವೆಯಾಗುತ್ತೀರಾ ಎಂದು ಬರೆದಿದ್ದಾನೆ.ಸ್ಕಾಟ್ಲೆಂಡ್‌ನ ಕ್ಲೈಡ್‌ಬ್ಯಾಂಕ್‌ನಲ್ಲಿರುವ […]

Advertisement

Wordpress Social Share Plugin powered by Ultimatelysocial