ಬೆಂಗಳೂರಿನಲ್ಲಿ ಟಿಕೆಟ್‌ ಕೇಳಿಲ್ಲ, ಮಂಡ್ಯ ಬಿಡಲ್ಲ: ಸಂಸದೆ ಸುಮಲತಾ

 

ಮಂಡ್ಯ: ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರ ಬಿಟ್ಟು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂಬುದು ಶುದ್ಧ ಸುಳ್ಳು. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ’ ಎಂದು ಸಂಸದೆ ಸುಮಲತಾ ಮಂಗಳವಾರ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು ಮಂಡ್ಯ ಬಿಟ್ಟು ಹೋಗುವುದಿಲ್ಲ, ಮಂಡ್ಯ ನನ್ನನ್ನು ಬಿಡುವುದಿಲ್ಲ. ನಾನು ಕ್ಷೇತ್ರ ಬಿಡುತ್ತೇನೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಕಾರಣ ಕೆಲವರು ರಾಜಕೀಯಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಮಗನಿಗಾಗಿಯೂ ನಾನು ಯಾವುದೇ ಪಕ್ಷದಿಂದ ಟಿಕೆಟ್‌ ಕೇಳಿಲ್ಲ’ ಎಂದರು.

ಮೈಸೂರು ಸಂಸದ ಪ್ರತಾಪ್‌ ಸಿಂಹ ವಿರುದ್ಧ ಶೀಥಲ ಸಮರ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು ‘ನನಗೆ ಯಾರ ವಿರುದ್ಧವೂ ಶೀಥಲ ಸಮರ ಇಲ್ಲ. ಹೆದ್ದಾರಿ ವಿಚಾರದಲ್ಲಿ ನಮ್ಮ ಜನರಿಗೆ ತೊಂದರೆಯಾದರೆ ನಾನು ಕೂಡ ಹೋರಾಟ ನಡೆಸುತ್ತೇನೆ. ಕೆಎಚ್‌ಬಿ ಕಾಲೊನಿಯಲ್ಲಿ ಹಾಳಾಗಿರುವ ರಸ್ತೆ ದುರಸ್ತಿ ಮಾಡಲು ದಿಶಾ ಸಭೆಯಲ್ಲೇ ಹಿಂದೆ ಸೂಚಿಸಿದ್ದೆ. ಅಲ್ಲಿ ಹೋಗಿ ಫೋಟೊ ತೆಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿದರೆ ನನಗೆ ಏನೂ ತೊಂದರೆ ಇಲ್ಲ’ ಎಂದರು.

ರೈಲಿನಲ್ಲಿ ಬಂದ ಸಂಸದೆ: ಸುಮಲತಾ ಬೆಂಗಳೂರಿನಿಂದ ರೈಲಿನಲ್ಲಿ ಬಂದರು. ಈ ಕುರಿತು ಮಾತನಾಡಿದ ಅವರು ‘ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಟ್ರಾಫಿಕ್‌ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ರೈಲಿನ ಮೂಲಕ ಪ್ರಯಾಣಿಸಿದೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Bridesandlovers.com: An Eastern European Dating Site Along With 175,000 Members Seeking Authentic Relationships

Tue Jun 28 , 2022
The Quick Version: its a huge globe available to you, and, making use of the conjunctive tools for the net, daters can now satisfy any person everywhere. As soon as you join a trustworthy worldwide network of singles, you don’t need to curb your dating customers to simply people in your area. […]

Advertisement

Wordpress Social Share Plugin powered by Ultimatelysocial