ನೋಂದಾಯಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸಲು ಕೇಂದ್ರ ಸರ್ಕಾರ,

ನವದೆಹಲಿ:ನೋಂದಾಯಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸಲು ಕೇಂದ್ರ ಸರ್ಕಾರ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಶನಿವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.ಕರ್ನಾಟಕದಲ್ಲಿ ಹಿಜಾಬ್‌-ಕೇಸರಿ ಶಾಲು ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ನಿಖಿಲ್ ಉಪಾಧ್ಯಾಯ ಎಂಬುವವರು ಈ ಪಿಐಎಲ್‌ ಸಲ್ಲಿಸಿದ್ದಾರೆ.’ಸಮಾನತೆ, ಭ್ರಾತೃತ್ವ ಹಾಗೂ ರಾಷ್ಟ್ರೀಯ ಏಕತೆಯನ್ನು ಸಾಧಿಸಲು ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸುವುದು ಅಗತ್ಯ’ ಎಂದು ವಕೀಲರಾದ ಅಶ್ವಿನಿ ಉಪಾಧ್ಯಾಯ ಹಾಗೂ ಅಶ್ವನಿ ದುಬೆ ಅವರ ಮೂಲಕ ಸಲ್ಲಿಸಿರುವ ಪಿಐಎಲ್‌ನಲ್ಲಿ ಪ್ರತಿಪಾದಿಸಲಾಗಿದೆ.ಸೋಮವಾರ (ಫೆ.14) ಈ ಅರ್ಜಿ ವಿಚಾರಣೆ ನಡೆಯಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಲಿದ್ದಾರೆ!!

Sat Feb 12 , 2022
ನೆಲ್ಸನ್ ದಿಲೀಪ್‌ಕುಮಾರ್ ಅವರ ‘ಡಾಕ್ಟರ್’ ಬ್ಲಾಕ್‌ಬಸ್ಟರ್ ಆಗಿ ಹೊರಹೊಮ್ಮಿದೆ ಮತ್ತು ಪ್ರಸ್ತುತ ವಿಜಯ್ ಅಭಿನಯದ ‘ಮೃಗ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ, ಅವರು ಮುಂದಿನ ಸೂಪರ್‌ಸ್ಟಾರ್ ರಜನಿಕಾಂತ್ ಅವರ 169 ನೇ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಗುರುವಾರ ಅಧಿಕೃತ ಪ್ರಕಟಣೆಯನ್ನು ಮಾಡುತ್ತಿದೆ ಸನ್ ಪಿಕ್ಚರ್ಸ್, ಚಿತ್ರವನ್ನು ನಿರ್ಮಿಸುವ ಸಂಸ್ಥೆ , ಟ್ವೀಟ್ ಮಾಡಿದ್ದಾರೆ, “ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ತಲೈವರ್ 169’ ಅನ್ನು ನೆಲ್ಸನ್ ದಿಲ್ಪ್‌ಕುಮಾರ್ ನಿರ್ದೇಶಿಸಿದ್ದಾರೆ ಮತ್ತು ಅನಿರುದ್ಧ್ ಸಂಗೀತ ನೀಡಿದ್ದಾರೆ.” ನೆಲ್ಸನ್ […]

Advertisement

Wordpress Social Share Plugin powered by Ultimatelysocial