ನವದೆಹಲಿ:ನೋಂದಾಯಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸಲು ಕೇಂದ್ರ ಸರ್ಕಾರ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಶನಿವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ನಿಖಿಲ್ ಉಪಾಧ್ಯಾಯ ಎಂಬುವವರು ಈ ಪಿಐಎಲ್ ಸಲ್ಲಿಸಿದ್ದಾರೆ.’ಸಮಾನತೆ, ಭ್ರಾತೃತ್ವ ಹಾಗೂ ರಾಷ್ಟ್ರೀಯ ಏಕತೆಯನ್ನು ಸಾಧಿಸಲು ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸುವುದು ಅಗತ್ಯ’ ಎಂದು ವಕೀಲರಾದ ಅಶ್ವಿನಿ ಉಪಾಧ್ಯಾಯ ಹಾಗೂ ಅಶ್ವನಿ ದುಬೆ ಅವರ ಮೂಲಕ ಸಲ್ಲಿಸಿರುವ ಪಿಐಎಲ್ನಲ್ಲಿ ಪ್ರತಿಪಾದಿಸಲಾಗಿದೆ.ಸೋಮವಾರ (ಫೆ.14) ಈ ಅರ್ಜಿ ವಿಚಾರಣೆ ನಡೆಯಲಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada