ವಾರದೊಳಗೆ ಮೀಸಲಾತಿ ಪ್ರಕಟಿಸಿ, ಚುನಾವಣೆ ಪ್ರಕ್ರಿಯೆ ಆರಂಭಿಸಿ: ಸರ್ಕಾರಕ್ಕೆ ಸುಪ್ರೀಂ ಆದೇಶ

ಬೆಂಗಳೂರು: ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮೀಸಲು ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ‌ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಇಂದಿನಿಂದ ಒಂದು ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.

ಇದರಿಂದಾಗಿ ರಾಜ್ಯ ಸರಕಾರ ಬಿಬಿಎಂಪಿಗೆ ಹಾಗೂ ಆ ಬಳಿಕ ಜಿಲ್ಲಾ, ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ.

ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲು ವಿಚಾರದಲ್ಲಿ ರಾಜ್ಯ ಸರಕಾರ‌ ಇಕ್ಕಟ್ಟಿಗೆ ಸಿಲುಕಿತ್ತು. ಸುಪ್ರೀಂ‌ ಕೋರ್ಟ್ ಗೆ ವರದಿ ಹಾಗೂ ವಸ್ತು ಸ್ಥಿತಿ ವಿವರ ನೀಡುವುದಕ್ಕೆ ನ್ಯಾ.ಭಕ್ತವತ್ಸಲಂ ಸಮಿತಿ ರಚಿಸಿತ್ತು. ಹಿಂದಿನ ಮೀಸಲು ವಿಧಾನದಲ್ಲೇ ಚುನಾವಣೆ ಎದುರಿಸುವ ಲೆಕ್ಕಾಚಾರ ಸರಕಾರದ್ದಾಗಿತ್ತು. ಆದರೆ ಸುಪ್ರೀಂ ಆದೇಶದ ಬಳಿಕ ಮೀಸಲು‌ಪಟ್ಟಿ ಹೇಗಿರುತ್ತದೆ? ಅದರಲ್ಲಿ ಹಿಂದುಳಿದವರ ಪ್ರಾತಿನಿಧ್ಯ ಎಷ್ಟು? ಎಂಬ ವಿಚಾರ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಆರ್.ಅಶೋಕ್, ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಲು ಸರ್ಕಾರ ಸಿದ್ದವಿದೆ. ತಕ್ಷಣ ಚುನಾವಣೆ ಘೋಷಣೆ ಮಾಡಲು ಯಾವುದೆ ತೊಂದರೆಯಿಲ್ಲ. ಸುಪ್ರೀಂ ಆದೇಶವನ್ನು ಪಾಲನೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

:ಪ್ರವೀಣ್ ಕುಟುಂಬಕ್ಕೆ 10 ಲಕ್ಷ ನೆರವು: ಡಾ.ಅಶ್ವತ್ಥನಾರಾಯಣ

Thu Jul 28 , 2022
ಬೆಂಗಳೂರು, ಜುಲೈ 28: ಅಮಾನುಷವಾಗಿ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ’ ಎಂದರು. 10 ಲಕ್ಷ ರೂಪಾಯಿಗಳ ಚೆಕ್ ಅನ್ನು ಮೃತ […]

Advertisement

Wordpress Social Share Plugin powered by Ultimatelysocial