ಗ್ಯಾನ್‌ ವಾಪಿ ಮಸೀದಿ ವಿವಾದ: ಆಯ್ಕೆಯಾದ ದಾಖಲೆ ಸೋರಿಕೆ ನಿಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ!

 

ಆಯ್ಕೆ ಮಾಡಿ ಕೆಲವೇ ದಾಖಲೆಗಳನ್ನು ಸೋರಿಕೆ ಮಾಡುವುದನ್ನು ಕೂಡಲೇ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್‌ ಅಧಿಕಾರಿಗಳಿಗೆ ಆದೇಶಿಸಿದೆ.

ವಾರಣಾಸಿಯ ಗ್ಯಾನ್‌ ವಾಪಿ ಮಸೀದಿಯಲ್ಲಿ ಶಿವನ ದೇವಸ್ಥಾನ ಇತ್ತು ಎಂಬ ವಿವಾದದ ಕುರಿತ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌, ಪ್ರಕರಣದ ಕಕ್ಷಿದಾರರು ದಾಖಲೆಗಳನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡುವುದರಲ್ಲಿ ಹೆಚ್ಚು ಆಸಕ್ತಿ ವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಚಂದ್ರಚೂಡ್‌ ನೇತೃತ್ವದ ಪೀಠ, ಸಮಿತಿ ಸರ್ವೆ ನಡೆಸಿದ ದಾಖಲೆಗಳು ನ್ಯಾಯಲಯಕ್ಕೆ ಸೇರಿದ್ದು, ಆಯ್ಕೆ ಮಾಡಿದ ದಾಖಲೆಗಳನ್ನು ಮಾತ್ರ ಮಾಧ್ಯಮಗಳಿಗೆ ಬಿಡುಗಡೆ ಮಾಡುವುದರ ಹಿಂದೆ ಯಾವ ಉದ್ದೇಶವಿದೆ ಎಂದು ಪ್ರಶ್ನಿಸಿದೆ.

ಎರಡು ಸಮುದಾಯಗಳ ಮಧ್ಯೆ ಶಾಂತಿ ಕಾಪಾಡುವುದು ಎಲ್ಲದಕ್ಕಿಂತ ಮುಖ್ಯ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಎಸ್‌ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

Fri May 20 , 2022
  ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆ ಮಲೆನಾಡಿನಲ್ಲಿ ಇಂದೂ ಮುಂದುವರಿದೆ. ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿದ್ದು, ಗಾಳಿಯ ರಭಸಕ್ಕೆ ಕೆಎಸ್‌ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ನಡೆದಿದೆ. ಸರ್ಕಾರಿ ಬಸ್ ಮೂಡಿಗೆರೆಯಿಂದ-ಚಿಕ್ಕಮಗಳೂರಿಗೆ ಸಂಚಾರ ನಡೆಸುತ್ತಿತ್ತು. ಕುದುರೆಗುಂಡಿ ಬಳಿ ಬಂದಾಗ ವಿದ್ಯುತ್ ಕಂಬ ಮುರಿದು ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿದೆ. ಮುರಿದ ಕಂಬ ಬಸ್ […]

Advertisement

Wordpress Social Share Plugin powered by Ultimatelysocial