ಮುದ್ದು ಮುಖದ ನಟಿ ಸಾನ್ಯಾ ಐಯ್ಯರ್ ಅಷ್ಟೆ ಧೈರ್ಯಶಾಲಿಯೂ ಹೌದು.

ಮುದ್ದು ಮುಖದ ನಟಿ ಸಾನ್ಯಾ ಐಯ್ಯರ್ ಅಷ್ಟೆ ಧೈರ್ಯಶಾಲಿಯೂ ಹೌದು. ಬಿಗ್‌ಬಾಸ್‌ ಒಟಿಟಿ ಹಾಗೂ ಟಿವಿ ಎರಡರಲ್ಲೂ ಹಲವು ಭಾರಿ ತಮ್ಮ ಧೈರ್ಯ ಹಾಗೂ ಬಿಂದಾಸ್‌ತನ ಪ್ರದರ್ಶಿಸಿದ್ದಾರೆ ಸಾನ್ಯಾ. ಇದೀಗ ವೇದಿಕೆಯೊಂದರಲ್ಲಿಯೂ ಸಾನ್ಯಾ ತಾವು ಗಟ್ಟಿಗಿತ್ತಿಯೆಂದು ಸಾಬೀತುಪಡಿಸಿದ್ದಾರೆ.

ಆಗಿದ್ದಿಷ್ಟು, ನಟಿ ಸಾನ್ಯಾ ಐಯ್ಯರ್, ಇತ್ತೀಚೆಗೆ ಪುತ್ತೂರಿನ ಕಂಬಳ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಭಾಗವಹಿಸಿದ್ದರು, ಕಾರ್ಯಕ್ರಮದಲ್ಲಿ ಸಾನ್ಯಾ ಐಯ್ಯರ್ ಭಾಷಣ ಮಾಡುವಾಗ ಯುವಕನೋರ್ವ ಕುಡಿದು ಕೆಟ್ಟದಾಗಿ ವರ್ತಿಸಿದ್ದ, ‘ಸಾನ್ಯಾ ಐ ಲವ್ ಯೂ’ ಎನ್ನುತ್ತಾ, ಕಿರುಚಾಡುತ್ತಾ ಸಭೆಯಲ್ಲಿ ಮುಜುಗರ ಉಂಟು ಮಾಡಿದ್ದ. ಹಾಗಿದ್ದರೂ ಸಹ ನಟಿ ಸಾನ್ಯಾ ಅದನ್ನು ಗಮನಕ್ಕೆ ತೆಗೆದುಕೊಳ್ಳದೆ, ಕಂಬಳ, ತುಳುನಾಡಿನ ಬಗ್ಗೆ, ತುಳು ಭಾಷೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ವೇದಿಕೆ ಕಾರ್ಯಕ್ರಮದ ಬಳಿಕ ಸಾನ್ಯಾ ವೇದಿಕೆ ಇಳಿದಾಗ ಸೆಲ್ಫಿಗಾಗಿ ಸಾನ್ಯಾ ಕೈ ಹಿಡಿದು ಎಳೆದಿದ್ದಾನೆ ಆದರೆ ಆಗ ನಟಿಯು ಸೆಲ್ಫಿ ನಿರಾಕರಿಸಿ ಅಲ್ಲಿಂದ ತೆರಳಿದ್ದಾರೆ.

ಆದರೆ ಬಳಿಕ ಮತ್ತೆ ಕಂಬಳ ನೋಡಲು ಗೆಳತಿಯೊಟ್ಟಿಗೆ ಸಾನ್ಯಾ ಮರಳಿದಾಗ ಸಾನ್ಯಾರನ್ನು ಮತ್ತೆ ಪೀಡಿಸಿದ ಯುವಕ ನಟಿಯ ಕೂದಲು ಹಿಡಿದು ಎಳೆದಿದ್ದಾನೆ, ಸಾನ್ಯಾ ವಿರೋಧ ವ್ಯಕ್ತಪಡಿಸಿದಾಗ, ಆಕೆಯ ಕಪಾಳಕ್ಕೆ ಹೊಡೆದಿದ್ದಾನೆ. ಆಗ ಅಲ್ಲಿಯೇ ಇದ್ದ ಕೆಲವರು ಯುವಕನನ್ನು ಎಳೆದು ಅವನಿಗೆ ಧರ್ಮದೇಟು ನೀಡಿದ್ದಾರೆ.

ಘಟನೆ ಬಳಿಕ ಸಾನ್ಯಾ ಹಾಗೂ ಆಕೆಯ ಗೆಳೆತಿಯೊಬ್ಬರು ಘಟನೆ ಬಗ್ಗೆ ವೇದಿಕೆ ಮೇಲೆಯೇ ಆಯೋಜಕರೊಟ್ಟಿಗೆ ಏರಿದ ಧ್ವನಿಯಲ್ಲಿ ಪ್ರಶ್ನೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಯೋಕರೊಬ್ಬರಿಗೆ ಬೆರಳು ತೋರಿಸಿ, ”ಸರ್, ಹೆಣ್ಣು ಮಕ್ಕಳ ಮೈ ಮುಟ್ಟಿದರೆ ಚೆನ್ನಾಗಿರಲ್ಲ” ಎಂದು ಖಡಕ್ ಆಗಿ ಸಾನ್ಯಾ ಎಚ್ಚರಿಕೆ ನೀಡುತ್ತಿರುವ ವೀಡಿಯೋ ಇದೀಗ ವೈರಲ್ ಆಗಿದೆ. ಸಾನ್ಯಾ ಬಳಿ ಅಸಭ್ಯವಾಗಿ ವರ್ತಿಸಿರುವ ಯುವಕನ ಬಗ್ಗೆ ದೂರು ದಾಖಲಾಗಿರುವ ಬಗ್ಗೆಯಾಗಲಿ, ವಶಕ್ಕೆ ಪಡೆದ ಬಗ್ಗೆಯಾಗಲಿ ವರದಿಯಾಗಿಲ್ಲ.

ಘಟನೆಗೂ ಮುನ್ನ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ್ದ ನಟಿ ಸಾನ್ಯಾ ಐಯ್ಯರ್, ”ನನಗೆ ತುಳು ಬರೋದಿಲ್ಲ. ಆದರೆ ನನಗೆ ತುಳು ಭಾಷೆ ತುಂಬಾ ಇಷ್ಟ. ಕಂಬಳ ಕೇವಲ ಸಾಂಸ್ಕೃತಿಕ ಕಲೆ ಅಥವಾ ಕ್ರೀಡೆ ಅಲ್ಲ‌. ಕಂಬಳ ಎನ್ನುವುದು ಜೀವನದ ಮೌಲ್ಯ. ತುಳುನಾಡಿನ ಸಂಸ್ಕೃತಿ ನಮಗೆ ಜೀವನ ಪಾಠ ಕಲಿಸಿಕೊಡುತ್ತದೆ. ಎಲ್ಲಾ ಕಲೆಗಳ ಹಿಂದೆ ಪಾಠಗಳಿವೆ” ಎಂದು ಹೇಳಿದ್ದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಿಚ್ಚನ ಸಿನಿಮಾ ಜರ್ನಿಗೆ 27 ವರ್ಷ; 4 ಚಿತ್ರರಂಗಗಳಿಗೆ ಧನ್ಯವಾದ ತಿಳಿಸಿದ ಸುದೀಪ್.

Tue Jan 31 , 2023
ಕನ್ನಡ ಚಲನಚಿತ್ರರಂಗದ ಸದ್ಯದ ಪಿಲ್ಲರ್‌ಗಳು ಎಂದು ಹೇಳಿದ ಕೂಡಲೇ ತಲೆಗೆ ಬರುವ ಕೆಲ ಕಲಾವಿದರ ಹೆಸರಿನಲ್ಲಿ ಕಿಚ್ಚ ಸುದೀಪ್ ಸಹ ಒಬ್ಬರು. ಭಿನ್ನ ವಿಭಿನ್ನ ಕಥಾಹಂದರವಿರುವ ಚಿತ್ರಗಳಲ್ಲಿ ನಟಿಸಿರುವ ಕಿಚ್ಚ ಸುದೀಪ್ ಕನ್ನಡ ಸಿನಿ ರಸಿಕರ ಮನಸಿನಲ್ಲಿ ನೆಲೆಯೂರಿದ್ದಾರೆ. ಕೇವಲ ನಟನೆ ಮಾತ್ರವಲ್ಲದೇ ನಿರ್ದೇಶಕ ಹಾಗೂ ನಿರ್ಮಾಪಕನಾಗಿಯೂ ಕನ್ನಡ ಚಲನಚಿತ್ರರಂಗದಲ್ಲಿ ಕೆಲಸ ನಿರ್ವಹಿಸಿ ಸೈ ಎನಿಸಿಕೊಂಡು, ಹಲವಾರು ಕೊಡುಗೆಗಳನ್ನು ನೀಡಿರುವ ಕಿಚ್ಚ ಸುದೀಪ್ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟು 27 ವರ್ಷಗಳನ್ನು […]

Advertisement

Wordpress Social Share Plugin powered by Ultimatelysocial