ಟಿ ನರಸೀಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಸುದ್ದಿಗೋಷ್ಠಿ.

ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಸುದ್ದಿಗೋಷ್ಠಿ. ಪಟ್ಟಣದ ಸರ್ಕಾರಿ ನೌಕರರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ. ಸರ್ಕಾರಕ್ಕೆ ಗಡುವು ನೀಡಿದಸರ್ಕಾರಿ ನೌಕರ ಸಂಘದ ಅಧ್ಯಕ್ಷ ಶಿವಶಂಕರಮೂರ್ತಿ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಶಿವಶಂಕರ್ ಮೂರ್ತಿ. ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಯಾವುದೇ ಯೋಜನೆ ಜಾರಿ ಮಾಡಿಲ್ಲ. ಸರ್ಕಾರಿ ನೌಕರರ ಬಹು ಬೇಡಿಕೆಯಾದ 7ವೇತನ ಜಾರಿ ಮಾಡಬೇಕು. ಜೊತೆಗೆ ಹೊಸ ಪಿಂಚಣಿ ಯೋಜನೆ ರದ್ದು ಮಾಡಬೇಕು. ಹಳೆ ಪಿಂಚಣಿ ಯೋಜನೆಯನ್ನ ತಕ್ಷಣದಿಂದಲೇ ಜಾರಿ ಮಾಡಬೇಕು. ಈಗಾಗಲೇ ರಾಜ್ಯಾಧ್ಯಕ್ಷರು ಮಾರ್ಚ್ 1ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವಂತೆ ಆದೇಶ ಹೊರಡಿಸಿದ್ದಾರೆ. ಅದರಂತೆ ನಮ್ಮ ತಾಲ್ಲೂಕಿನಲ್ಲಿಯೂ ಸಹ ಸರ್ಕಾರಿ ನೌಕರರು ಮಾರ್ಚ್ 1ರಿಂದ ಕರ್ತವ್ಯಕ್ಕೆ ಗೈರಾಗುತ್ತೇವೆ. ಸರ್ಕಾರ ಕೂಡಲೇ ಎಚ್ಛೆತ್ತುಕೊಂಡು ನಮ್ಮ ಬೇಡಿಕೆಗಳನ್ನ ಈಡೇರಿಸಬೇಕು. ನಮ್ಮ ಬೇಡಿಕೆಗೆ ಸರ್ಕಾರ ಮನ್ನಣೆ ನೀಡದೆ ಇದ್ದಲ್ಲಿ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ ಎಂದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಸುಬ್ರಹ್ಮಣ್ಯ, ಹಾಜರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

: ಸೌರವ್ ಗಂಗೂಲಿ ಬಯೋಪಿಕ್ ಚಿತ್ರಕ್ಕೆ ಹೀರೋ ಸಿಕ್ಕಾಯ್ತು:

Thu Feb 23 , 2023
ಇತ್ತೀಚಿನ ಚಿತ್ರರಂಗದಲ್ಲಿ ಬಯೋಪಿಕ್ ಸಿನಿಮಾಗಳ ಆರ್ಭಟ ಜೋರಾಗಿದೆ. ಕ್ರೀಡಾ ಕ್ಷೇತ್ರದ ಸಾಧಕರು, ರಾಜಕೀಯರಂಗದ ನಾಯಕರು, ಸಿನಿಮಾ ತಾರೆಯರು, ಉದ್ಯಮಿಗಳ ಜೀವನಾಧರಿತ ಸಿನಿಮಾಗಳನ್ನು ತೆರೆಗೆ ತರಲಾಗುತ್ತಿದೆ. ಇದರಲ್ಲಿ ಕ್ರೀಡಾ ಕ್ಷೇತ್ರದ ಸಾಧಕರ ಕಥೆಗಳೇ ಹೆಚ್ಚು.ಧೋನಿ, ಸಚಿನ್, ಕಪಿಲ್ ನಂತರ ಸೌರವ್ ಗಂಗೂಲಿ ಬಯೋಪಿಕ್ ಸಿನಿಮಾ ನಿರ್ಮಾಣಕ್ಕೆ ವೇದಿಕೆ ಸಿದ್ದವಾಗಿದೆ. ಚಿತ್ರದಲ್ಲಿ ಬೆಂಗಾಲ್ ಟೈಗರ್ ಆಗಿ ಯಾರು ನಟಿಸ್ತಾರೆ ಎನ್ನುವುದು ಪಕ್ಕಾ ಆಗಿದೆ.ಬಹಳ ದಿನಗಳಿಂದ ಸೌರವ್ ಗಂಗೂಲಿ ಬಯೋಪಿಕ್ ಬಗ್ಗೆ ಚರ್ಚೆ ನಡೀತಿದೆ. […]

Advertisement

Wordpress Social Share Plugin powered by Ultimatelysocial