ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈವರೆಗೆ 27 ಜನರನ್ನು ಬಂಧಿಸಲಾಗಿದೆ.ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಿರುವ ಘಟನೆಯನ್ನು ನೆಪವಾಗಿಸಿಕೊಂಡು ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನೇತೃತ್ವದಲ್ಲಿ ಪುಂಢರು ಸಂಭಾಜಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಿದ್ದರು.ಈ ಸಂಬಂಧ ಖಡೇಬಜಾರ್, ಕ್ಯಾಂಪ್ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ […]