ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಕಡುಬಡವರಿಗೆ ಹಾಗೂ ಮನೆ ಇಲ್ಲದವರಿಗೆ ಮತ್ತು ನಿರ್ಗತಿಕ ಕುಟುಂಬಗಳಿಗೆ ನಿವೇಶನ ಒದಗಿಸಿಕೊಡಲು ಒತ್ತು ನೀಡುವುದಾಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ.ಕುಷ್ಟಗಿ ನಗರದ ಕೆರೆ ಅಂಗಳದಲ್ಲಿ ಅಕ್ರಮ ಸಕ್ರಮ ಯೋಜನೆಯಲ್ಲಿ ಮನೆ ಕಟ್ಟಿಕೊಂಡ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಪಟ್ಟಣದ ಕೆರೆ ಅಂಗಳದಲ್ಲಿ ಸುಮಾರು 292 ಅರ್ಜಿದಾರರು ವಾಸವಾಗಿದ್ದರು. ಅದರಲ್ಲಿ 93 ಅರ್ಜಿದಾರರು ಸರಿಯಾದ ರೀತಿಯಲ್ಲಿ ದಾಖಲಾತಿ ಹೊಂದಿಲ್ಲದ ಕಾರಣ […]