ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ರವರು ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಸೌಲಭ್ಯವನ್ನು ಕಲ್ಪಿಸಲಾಗಿದೆ, ಕೊರೋನಾ ಚಿಕಿತ್ಸೆಗಾಗಿ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಕೊವಿಡ್ -19 ಪಾಸಿಟಿವ್ ರೋಗಿಗಳು ಯಾವುದೇ ರೀತಿಯ ಭಯ ಪಡುವಂತಿಲ್ಲ ಹಾಗೂ ಜನರು ಬ್ರಿಮ್ಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಹಾಗೂ 33 ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ ಜನಗಳು ಇದನ್ನು ಉಪಯೋಗಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.