ಹೊಸ ವರ್ಷಾಚರಣೆ ಸಂದರ್ಬದಲ್ಲಿ  ಕಠಿಣ ನಿಯಮ ಜಾರಿಗೆ ತರುವ ಕುರಿತಾಗಿ ಮುಂದಿನ ವಾರದಲ್ಲಿ ನಿರ್ದಾರವನ್ನು ತೆಗೆದುಕೊಳ್ಳುವುದಾಗಿ ಮುಖ್ಯ ಮಂತ್ರಿ ಹೇಳಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿಯಲ್ಲಿ ನಡೆದ  ಒಕ್ಕಲುತನ ಹುಟ್ಟುವಳಿ  ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವ ಸಂಬಂಧ ತಜ್ಞರ ಸಮಿತಿ ಜೊತೆ ಚರ್ಚಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರು ಹೊಸ ವರ್ಷಾಚರಣೆಗೆ ಸಂಬಂದಿಸಿ ಕೇಳಿದ […]

ಕೋವಿಡ್-19 ಸೋಂಕಿತರ ಅಂತ್ಯಕ್ರಿಯೆಗೆ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35 ಎಕರೆ 18 ಗುಂಟೆ ಸ್ಥಳವನ್ನು ಗುರುತಿಸಲಾಗಿದೆ. ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ಬಳಕೆ ಮಾಡಲಾಗುತ್ತಿದೆ. ಸೋಂಕಿನಿಂದ ಸಾವನ್ನಪ್ಪಿದವರನ್ನು ಸಾಮಾನ್ಯ ಸ್ಮಶಾನ ಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವ ಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ […]

Advertisement

Wordpress Social Share Plugin powered by Ultimatelysocial