ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ನಿಮ್ಮದೇ ಪಕ್ಷದ ನಾಯಕರಾದ […]

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಜರಾಯಿ ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ […]

ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮಧ್ಯ  ಮಾತಿನ ಸಮರ ನಡೆಯುತ್ತಿದೆ. ಅದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್​ ಸೇರಲು ಮುಂದಾಗಿದ್ದಾರೆ ಎಂದು ಹೆಚ್​​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಹೆಚ್​​.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ದಿಢೀರ್​ ಅಂತ ಸೋನಿಯಾ ಗಾಂಧಿ ಭೇಟಿ ಆಗಿದ್ದೇಕೆ.? […]

ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಂದಗಿ–ಹಾನಗಲ್​ ಉಪ ಚುನಾವಣೆಗೆ ಸಂಬಂಧಿಸಿದಂತೆ ದಾವಣೆಗೆರೆ ಜಿಎಂಐಟಿಯಲ್ಲಿ ಸಚಿವರಾದ ಬಿ.ಸಿ. ಪಾಟೀಲ, ಸುನೀಲ್​ ಕುಮಾರ್​ ಸೇರಿದಂತೆ ಪ್ರಮುಖ ಮುಖಂಡರ ಜೊತೆಗೆ ಗುಪ್ತ ಸಭೆ ನಡೆಸಿದ್ದಾರೆ. ಸೋಮವಾರ ರಾತ್ರಿ ದಾವಣಗೆರೆಗೆ ಹೋಗಿದ್ದ ಸಿಎಂ ಬೊಮ್ಮಾಯಿ, ಗುಪ್ತ ಸಭೆ ನಡೆಸಿದ್ದು, ಇಂದು ಹಾವೇರಿ ಜಿಲ್ಲೆಯ ಇನ್ನೂ ಕೆಲವು ನಾಯಕರೊಂದಿಗೆ ಇನ್ನೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಚುನಾವಣೆ ನಿರ್ವಹಣೆಗೆ ಪ್ರತ್ಯೇಕ ಸಮಿತಿಯನ್ನ ಬೊಮ್ಮಾಯಿ ರಚಿಸಲಿದ್ದಾರೆ ಎಂದು ಬಿಜೆಪಿಯ ಪ್ರಮುಖರು […]

ಆಮ್​ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದೂರು ಹೇಳುವ ಒಂದೂ ಅವಕಾಶವನ್ನು ಬಿಡುವುದಿಲ್ಲ. ಇದೀಗ ದೇಶದ ಕೆಲವು ರಾಜ್ಯಗಳಿಗೆ ಕಲ್ಲಿದ್ದಲಿನ ಪೂರೈಕೆ ಕಡಿಮೆಯಾಗಿ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಕೇಜ್ರಿವಾಲ್​ ಕೂಡ ವಿದ್ಯುತ್​ ಉತ್ಪಾದಕ ಘಟಕಗಳಿಗೆ ಕೇಂದ್ರದಿಂದ ಕಲ್ಲಿದ್ದಲು ಪೂರೈಕೆ ಕಡಿಮೆ ಆಗಿ ದೆಹಲಿಗೆ ವಿದ್ಯುತ್​ ಅಭಾವ ಎದುರಾಗುವ ಚಿಂತಾಜನಕ ಸ್ಥಿತಿ ಇದೆ […]

ರಾಜ್ಯದ ಕೆಲವೆಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದ್ದಾರೆ.. ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ […]

 ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಬಾಹ್ಯಾಕಾಶ ಕ್ಷೇತ್ರದ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ್ದಾರೆ.  ಪ್ರಧಾನ ಮಂತ್ರಿಯವರ ಆತ್ಮನಿರ್ಭರ ಭಾರತ ದೃಷ್ಟಿಕೋನವನ್ನು ಪ್ರತಿಧ್ವನಿಸುವ ಐ.ಎಸ್.ಪಿ.ಎ. ಭಾರತವನ್ನು ಸ್ವಾವಲಂಬಿ, ತಾಂತ್ರಿಕವಾಗಿ ಮುಂದುವರಿದ ಹಾಗೂ ಬಾಹ್ಯಾಕಾಶ ರಂಗದಲ್ಲಿ ಪ್ರಮುಖ ಪ್ಲೇಯರ್‌ ಆಗಿ ಮಾಡಲು ಸಹಾಯ ಮಾಡುತ್ತದೆ ಎಂದು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ. […]

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದಿದ್ದಾರೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸಿರುವುದು ಅಕ್ಷಮ್ಯ ಎಂದಿದ್ದಾರೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ […]

ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ […]

ಬೆಂಗಳೂರು: ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್‌ ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ‘ ಎಂದು ಆರ್‌. ಅಶೋಕ ಹೇಳಿದರು. ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ […]

Advertisement

Wordpress Social Share Plugin powered by Ultimatelysocial