ಕಾಲೇಜಿನಲ್ಲಿಯೇ ನೇಣುಬಿಗಿದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ವೆಂಕಟ ಚೈತನ್ಯ ರೆಡ್ಡಿ ಆತ್ಮಹತ್ಯೆಗೆ ಶರಣಾದ ಯುವಕ. ಚನ್ನಪಟ್ಟಣದ ಖಾಸಗಿ ಕಾಲೇಜಿನಲ್ಲಿ BSC ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವೆಂಕಟ್ ಶೌಚಾಲಯದ ಕಿಟಕಿಯ ಸರಳುಗಳಿಗೆ ನೇಣುಬಿಗಿದುಕೊಂಡಿದ್ದಾನೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರ ಮಾಡಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಕೇಸ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಜವರಾಯನ ಅಟ್ಟಹಾಸ,ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಸಾವು  

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುವಾಗ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಾಗಳಾಗಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮಹ್ಮದ್ ಸಗೀರ್ (30) ಮೃತ ದುರ್ದೈವಿ.ಇನ್ನು ಈ ಪ್ರಕರಣವು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ :ಕೊಲೆ ಆರೋಪಿ ಕಾಲಿಗೆ ಗುಂಡೇಟು

Advertisement

Wordpress Social Share Plugin powered by Ultimatelysocial