ಆಂಧ್ರ ಪ್ರದೇಶ್‌  ಸರ್ಕಾರ ಹಾಗೂ ತೆಲುಗು ಚಿತ್ರರಂಗದ ನಡುವೆ ಕಳೆದ ಕೆಲ ತಿಂಗಳಿಂದ ತೀವ್ರ  ಅಸಮಾಧನವಿತ್ತು. ಜಗನ್ ಸರ್ಕಾರವು ಆಂಧ್ರ ಪ್ರದೇಶದಲ್ಲಿ ಟಿಕೆಟ್ ದರಗಳನ್ನು ಹೆಚ್ಚು ತಗ್ಗಿಸಿರುವ ಕಾರಣ ತೆಲುಗು ಚಿತ್ರರಂಗ ಹಾಗೂ ಆಂಧ್ರದ ಚಿತ್ರಮಂದಿರ ಮಾಲೀಕರ ಸಂಘ ತೀವ್ರ ಅಸಮಾಧನ ವ್ಯಕ್ತಪಡಿಸಿದರು. ಟಿಕೆಟ್ ದರ ಇಳಿಕೆ ವಿಷಯವಾಗಿ ಆಂಧ್ರ ಸರ್ಕಾರ ಹಾಗೂ ತೆಲುಗು ಚಿತ್ರರಂಗದ ನಡುವೆ ಪ್ರತಿಷ್ಠೆ ಪ್ರಶ್ನೆಯಾಗಿ ಬೆಳೆದು, ಚಿತ್ರರಂಗದವರು ಸರ್ಕಾರದ ವಿರುದ್ಧ ಸರ್ಕಾರದ ಶಾಸಕರು, […]

ಸ್ಯಾಂಡಲ್‍ವುಡ್ ನ  ನಟಿ ಮೇಘನಾ ರಾಜ್ ಹಲವು ವರ್ಷಗಳ ಗ್ಯಾಪ್ ಬಳಿಕ ಇದೀಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ವರ್ಷ ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಮತ್ತೆ ಸ್ಯಾಂಡಲ್‍ವುಡ್‍ಗೆ ಕಮ್‍ಬ್ಯಾಕ್ ಮಾಡುತ್ತಿರುವ ಕುರಿತಂತೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು    ಇದೀಗ  ಮೇಘನಾಅವರು  ಮೊದಲ ದಿನದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದಾರೆ. ಪನ್ನಾಗಭರಣಅವರು  ಮಾಡುತ್ತಿರುವ ಜಾಹೀರಾತು ಶೂಟಿಂಗ್ ಭರದಿಂದ ಸಾಗುತ್ತಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada     […]

ಜಯತೀರ್ಥ ನಿರ್ದೇಶನದ  ಬನಾರಸ್ ಸಿನಿಮಾ ಆಡಿಯೋ ಹಕ್ಕು ಟಿ ಸಿರೀಸ್ ಮತ್ತು ಲಹರಿ ಸಂಸ್ಥೆ ಪಾಲಾಗಿದೆ. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟಿಸಿರುವ ಬನಾರಸ್ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಜೈದ್ ಖಾನ್ ಗೆ ಸೋನಾಲ್ ಮಾಂಟೆರಿಯೋ ನಾಯಕಿಯಾಗಿದ್ದಾರೆ.

ಭಾರತ ಚಿತ್ರರಂಗದ ಸೂಪರ್​ ಸ್ಟಾರ್​, ತಲೈವಾ ರಜನಿಕಾಂತ್​ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್‌ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್​ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ  ರಜನಿ ಸಣ್ಣ ಶಸ್ತ್ರಚಿಕಿತ್ಸೆ  ಒಂದಕ್ಕೆ ಒಳಗಾಗಿದ್ದರು.  ಬಳಿಕ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡಿದ್ದರು. ಆದರೆ ರೂಟಿನ್​ ಚೆಕ್​ಅಪ್​ಗೆ ಬಂದಾಗ […]

ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಚಿತ್ರದ ಟ್ರೈಲರ್‌ ಯೂಟ್ಯೂಬ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆಯಾಗಿತ್ತು. ರಜನಿಕಾಂತ್‌ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್‌ ಲುಕ್‌ ನೀಡಿದ್ದಾರೆ.ಟ್ರೈಲರ್‌ ನೋಡಿದರೆ ಇದೊಂದು ಪಕ್ಕಾ ಕೌಟುಂಬಿಕ ಸಿನಿಮಾದಂತೆ ಕಾಣುತ್ತದೆ. ಹಳ್ಳಿಯ ಕಥಾ ಹಂದರ ಇರುವ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್‌ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಯ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ. ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ’ ಚಿತ್ರಮಂದಿರಗಳಲ್ಲಿ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ. ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ […]

ಇಂದು ರಾಜ್ಯದ್ಯಂತ ನಟ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಬಿಡುಗಡೆಯಾಗಿದೆ. ಇಂತಹ ಸಂದರ್ಭದಲ್ಲಿ ವಿವಿಧೆಡೆ ನಟ ದರ್ಶನ್ ಅಭಿಮಾನಿಗಳು, ಹಾಲು, ಪುಷ್ಟ ಸೇರಿದಂತೆ ವಿವಿಧ ಅಭಿಷೇಕಗಳನ್ನು ದರ್ಶನ್ ಕಟೌಟ್ ಗೆ ಮಾಡುತ್ತಿದ್ದಾರೆ. ಆದರೆ ತುಮಕೂರಿನಲ್ಲಿ ಮಾತ್ರ, ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಕಟೌಟ್ ಗೆ  ಮದ್ಯಾಭಿಷೇಕ ಮಾಡಿ, ಅತಿರೇಕ ಮೆರೆದಿದ್ದಾರೆ. ತುಮಕೂರಿನ ತ್ರಿಮೂರ್ತಿ ಚಿತ್ರಮಂದಿರದಲ್ಲಿ ನಟ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಕಟೌಟ್ ಗೆ ದರ್ಶನ್ ಅಭಿಮಾನಿಗಳು ಮದ್ಯದ […]

ಕನ್ನಡ ಚಿತ್ರರಂಗದ ಚಂದದ ಜೋಡಿಗಳಲ್ಲಿ ಒಂದು ದಿಗಂತ್ ಹಾಗೂ ಐಂದ್ರಿತಾ ರೈ ಜೋಡಿ.. ಸುಮಾರು ಎಂಟು ವರ್ಷಗಳ ಬಳಿಕ ಇದೀಗ ಮತ್ತೆ ಈ ಜನಪ್ರಿಯ ಜೋಡಿ ತೆರೆ ಮೇಲೆ ಒಂದಾಗ್ತಿದೆ.. ದಿಗಂತ್ ಹಾಗೂ ಐಂದ್ರಿತಾ ಇಬ್ಬರೂ ಕೂಡ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.. ಅಲ್ಲದೆ ಮನಸಾರೆ ಹಾಗೂ ಪಾರಿಜಾತ ಚಿತ್ರಗಳಲ್ಲಿ ಈ ಇಬ್ಬರೂ ಒಟ್ಟಿಗೆ ಅಭಿನಯಿಸಿದ್ರು.. ಚಿತ್ರರಂಗದಲ್ಲಿ ಹಿಟ್ ಪೇರ್ ಅನ್ನಿಸಿಕೊಂಡ ದಿಗಂತ್-ಐಂದ್ರಿತಾ ನಿಜ ಜೀವನದಲ್ಲೂ […]

Advertisement

Wordpress Social Share Plugin powered by Ultimatelysocial