ನೀರಿಗಿಳಿದು ಜಲಸಮಾಧಿಯಾದ ಏಳು ಜನರ ಕುಟುಂಬಕ್ಕೆ ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಯಿಂದ ಹಣ ನೀಡಲು ಸಿಎಂ ಬಿಎಸ್ವೈ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಏಳು ಜನರು ನೀರಿಗೆ ಬಿದ್ದು ಮೃತಪಟ್ಡಿದ್ದಾರೆ. ಅದರಲ್ಲಿ ನಾಗಮಂಗಲ ತಾಲೂಕಿನ ಬೀರನಹಳ್ಳಿಯ ಗೀತಾ, ಸವಿತಾ, ಸೌಮ್ಯ ಅವರ ಕುಟುಂಬಕ್ಕೆ ತಲಾ ಐದು ಲಕ್ಷದಂತೆ ೧೫ ಲಕ್ಷ ರೂಪಾಯಿಗಳನ್ನು ಕೊಟ್ಟಿದ್ದಾರೆ. ಇನ್ನು ನಾಗಮಂಗಲ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ, ಇಂಚರಾ, ಕೆ.ಆರ್.ಪೇಟೆ […]