ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡುವುದಕ್ಕೆ ಭಯವೇಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವಾಜ್ ಬೊಮಾಯಿ ಅವರನ್ನು ಪ್ರಶ್ನಿಸಿದ್ದಾರೆ.ನಾನು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವುದಕ್ಕೆ ಬೊಮ್ಮಾಯಿಯವರಿಗೆ ಸವಾಲು ಹಾಕಿದ್ದೆ. ಆದರೆ ಅವರು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಅನ್ನುತ್ತಾರೆ. ಅವರು ಹೇಳಿದ್ದು ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡೋಕೆ ಏಕೆ ಭಯ ಎಂದು ಪ್ರಶ್ನಿಸಿದರು.ಬಿಜೆಪಿಯವರಿಗೆ ದುಡ್ಡು ಹಂಚುವುದೇ ಕೆಲಸ. […]

ಬಿಜೆಪಿ ಬಿ ಟೀಂ ಜೆಡಿಎಸ್ ಸಿದ್ದಾಮಯ್ಯ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಬಾಗಲಕೋಟೆಯಲ್ಲಿ  ಪ್ರತಿಕ್ರಿಯೆ ನೀಡಿದ್ದಾರೆ…ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್,ಒಪ್ಪಿಕೊಳ್ಳುತ್ತಾರೆ ಅವರು…ನಾವೇಲ್ಲೂ ಹೊಂದಾಣಿಕೆ ಮಾಡಿಕೊಂಡಿಲ್ಲ..ಎರಡು ಬಾರಿ ಹೆಚ್ ಡಿಕೆಯನ್ನ ಸಿಎಂ ಮಾಡಿದ್ದು ಕಾಂಗ್ರೆಸ್ …ಹೆಚ್ ಡಿ ದೇವೇಗೌಡರ ಜೋತೆ ಹೊಂದಾಣಿಕೆ ಮಾಡಿಕೊಂಡು ಹೆಚ್ ಡಿಡಿಯನ್ನ ಪ್ರಧಾನಿ ಮಾಡಿದ್ದು ನೀವೇ..ಬೆಂಗಳೂರು,ಮೈಸೂರು ಮಹಾನಗರ ಪಾಲಿಕೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿದವರು ನಿವೇ..ಹಾಗಾದ್ರೇ ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್ ..ಕಾಂಗ್ರೆಸ್ […]

ಸಚಿವರಿಲ್ಲದೆ ರಾಜ್ಯದ ಶಕ್ತಿಸೌಧ ಖಾಲಿ ಖಾಲಿಯಾಗಿದೆ ಉಪಚುನಾವಣೆ ಪ್ರಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಮ್ ಬ್ಯೂಸಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ….ಕಳೆದ ಹಲವಾರು ದಿನಗಳಿಂದ ವಿಧಾನಸೌಧದ ಕಡೆ ಸಿಎಂ ಬೊಮ್ಮಾಯಿ ಮುಖ ಮಾಡಿಲ್ಲ  ಉಪಚುನಾವಣೆ ಪ್ರಚಾರದಲ್ಲಿಯೇ  ಸಿಎಂ ಅವರು  ಫುಲ್ ಬ್ಯೂಸಿಯಾಗಿದ್ದಾರೆ…ರಾಜ್ಯದ ಎಲ್ಲಾ ಕೆಲಸಗಳನ್ನು ಸೈಡಿಗಿಟ್ಟು ಬೈ ಎಲೆಕ್ಷನ ಪ್ರಚಾರದಲ್ಲಿ  ಸಿಎಂ ನಿರತರಾಗಿದ್ದಾರೆ….ಉಪಚುನಾವಣೆ ನಡೆಯುವ ಕ್ಷೇತ್ರದಲ್ಲೆ ಠಿಕಾಣಿ ಹುಡಿದ್ದಾರೆ..ಇನ್ನು ಸಿಎಂ ಜೊತೆಗೆ ಮಂತ್ರಿಗಳು ಸಹ ಪ್ರಚಾರ ನಡೆಸುತ್ತಿದ್ದಾರೆ.ರಾಜ್ಯದ […]

‌ಹೆಚ್‌ ಡಿಕೆಗೆ ವಿರುದ್ಧ ಎಂಎಲ್‌ ಸಿ ಬೆಮೆಲ್ ಕಾಂತರಾಜು ವಾಗ್ದಾಳಿ ನಡೆಸಿದ್ದಾರೆ… ತುರುವೇಕೆರೆಯಲ್ಲಿ ನಾನು ವಿಧಾನಸಭೆಗೆ ಸ್ಪರ್ಧಿಸಬೇಕು…ಆದ್ರೆ ಹೆಚ್‌ ಡಿಕೆ MT ಕೃಷ್ಣಪ್ಪಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.HDK  ಅವರ ಇಂಥಹ ಮಾತುಗಳು ನಾವು ಹಿಂದಿನಿಂದಲೂ ನೋಡುತಿದ್ದೇವೆ.ಅವರು ಒಂದೊಂದು ಸಾರಿ ಒಂದೊಂದು ಮಾತು ಹೇಳುತ್ತಾರೆ.ಅವರಿಗೆ ಈ ಮಾತುಗಳು ಎಷ್ಟು ಶೋಭೆ ತರುತ್ತದೆ ಅನ್ನೋದು ಅವರೇ ಯೋಚನೆ ಮಾಡಲಿ.ಒಂದು ಕ್ಷೇತ್ರದಲ್ಲಿ ಇಬ್ಬಿಬ್ಬರು ನಾಯಕರನ್ನು ಬೆಳೆಸೋದು ಅವರಿಗೆ ರೂಢಿಯಾಗಿದೆ.ಮುಂದಿನ ದಿನಗಳಲ್ಲಿ ಜನರೇ  ಉತ್ತರ ಕೊಡುತ್ತಾರೆ.ಜೆಡಿಎಸ್ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಕೇಳಿಬರುವ ಸಾಧ್ಯತೆ ಇದೆ. ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಪೆಟ್ರೋಲ್  ಮತ್ತು ಡೀಸೆಲ್  ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ, ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ […]

ತಾಲಿಬಾನ್‌ ಆಡಳಿತವನ್ನು ಪರಿಶೀಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಗಾನಿಸ್ತಾನಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಹೇಳಿದರು.ನಗರದಲ್ಲಿ ನಡೆದ ವೆಂಕಟರಾಮು ಅಭಿನಂದನಾ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ, ಹಾನಗಲ್ ಉಪಚುನಾವಣೆ ಸಂಬಂಧ ವಿರೋಧ ಪಕ್ಷದವರು ಬಹಳ ಉದ್ವೇಗದಿಂದ, ವಿವೇಚನೆ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡಿದ್ದಾರೆ. ಅವರು ರಾಷ್ಟ್ರಮಟ್ಟದ ರಾಜಕೀಯವನ್ನು ಅರ್ಥ ಮಾಡಿಕೊಂಡು ಮಾತನಾಡುತ್ತಿಲ್ಲ. ಅವರ ಭಾಷಣ ಕೇಳಿದ್ದೀರಾ? ಯಾರಾದರೂ ಸಹಿಸುತ್ತಾರೆಯೇ? […]

ನಮ್ಮದು ಕೇವಲ ಮಾತುಗಳಲ್ಲ. ಕೆಲಸ ಮಾಡುತ್ತಿದ್ದೇವೆ. ಮಾತಿನಿಂದ ಹೊಟ್ಟೆ ತುಂಬುವುದಿಲ್ಲ ಎನ್ನುವುದು ಗೊತ್ತಿದೆ. ತಳಮಟ್ಟದಲ್ಲಿ ಮಾತಾಡಿದರೆ ದೊಡ್ಡವರಾಗಲ್ಲ. ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದರು. ಹಾನಗಲ್ಲ ಕ್ಷೇತ್ರದ ಚಿಕ್ಕೌಶಿ– ಹೊಸೂರು ಗ್ರಾಮದಲ್ಲಿ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರನ್ನಾದರೂ ಆಯ್ಕೆ ಮಾಡಬೇಕಾದರೆ ಜನರು ತುಲನಾತ್ಮಕವಾಗಿ ನೋಡುತ್ತಾರೆ. ಉದಾಸಿ ಆರು ಬಾರಿ ಆಯ್ಕೆಯಾಗಿದ್ದರು ಎಂದರೆ ನಿಮ್ಮ ಹೃದಯದಲ್ಲಿ […]

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ. ಉಳಿದಂತೆ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ವೇದಿಕೆ ಮೇಲೆ ಕರೆತರುವ ಪ್ರಯತ್ನ ಮಾಡುತ್ತೇವೆ ಎಂಬ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಯಿಸಿದರು. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಆ […]

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದರು.ಈ ಎಲ್ಲಾ ಬೆಳವಣಿಗೆಗಳ […]

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ನಿಮ್ಮದೇ ಪಕ್ಷದ ನಾಯಕರಾದ […]

Advertisement

Wordpress Social Share Plugin powered by Ultimatelysocial