ಮೈಸೂರಿನ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಯೊಬ್ಬರಿಗೆ ಕೋವಿಡ್-೧೯ ಇರುವುದು ದೃಢಪಟ್ಟಿದೆ. ಈ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಜೊತೆಗಿದ್ದ ನಾಲ್ವರನ್ನು ಜೈಲಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ.ಮೈಸೂರಿನಲ್ಲಿ ಈಚೆಗೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ, ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ. ನಂತರ ಪೊಲೀಸರಿಗೆ ಶರಣಾಗಿದ್ದ. ಬೆಂಗಳೂರಿನಲ್ಲಿದ್ದ ಕಾರಣ ಆತನನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂನ್ ೩೦ರಂದು ಗಂಟಲು ದ್ರವ ಪಡೆದು, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಹೀಗಾಗಿ, ವಿಜಯನಗರ ಠಾಣೆಯ ಪೊಲೀಸರು ಕೂಡ ಈಗ ಆತಂಕದಲ್ಲಿದ್ದಾರೆ. […]

Advertisement

Wordpress Social Share Plugin powered by Ultimatelysocial