ಮಾಜಿ ಸಿಎಂ ಸಿದ್ದರಾಮಯ್ಯ ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸಂಪರ್ಕದಿಂದ ದೂರವಿರಲು ಸಿದ್ದರಾಮಯ್ಯ ಮೈಸೂರು ಸಮೀಪವಿರುವ ಫಾರ್ಮ್ ಹೌಸ್ ಗೆ ತೆರಳಿದ್ದಾರೆ. ತಮ್ಮ ಪುತ್ರ ಡಾ.ಯತೀಂದ್ರ ಅವರ ಸಲಹೆಯ ಮೇರೆಗೆ ಸಾರ್ವಜನಿಕ ಸಂಪರ್ಕದಿಂದ ದೂರ ಉಳಿದಿದ್ದಾರಷ್ಟೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯ ಸಕ್ರಿಯವಾಗಿದ್ದಾರೆ. ಕೊರೋನಾ ವಿರುದ್ಧ ಹೋರಾಡಲು ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಕೈಗೊಂಡ […]