ಮಂಡ್ಯದ ಕೆರೆ ಕಾಮೇಗೌಡರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ, ೮೨ ವರ್ಷದ ಕಾಮೇಗೌಡರು ಈಚೆಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಾಲಿಗೆ ತೀವ್ರ ಗಾಯವಾಗಿತ್ತು. ಬಲಗಾಲಿನ ನರ ಸಂಬAಧಿ ಕಾಯಿಲೆಯ ಗಾಯ ಉಲ್ಬಣಗೊಂಡಿದ್ದ ಹಿನ್ನೆಲೆ ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲೇ ಅವರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಕಳೆದ ವಾರ ಮಂಡ್ಯದ ಕಾಮೇಗೌಡರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ […]