ಬೆಂಗಳೂರಿನಲ್ಲಿ ಎರಡು ದಿನ ಶೇ.10ರಷ್ಟು  BMTC ಬಸ್ ಗಳು ಸಂಚರಿಸಲಿವೆ – ವೀಕೆಂಡ್ ಕರ್ಫ್ಯೂ ವೇಳೆ ಸಾರ್ವಜನಿಕ ಸೇವೆ ಇರುವುದಿಲ್ಲ – ಶೇ10 ರಷ್ಟು ಮಾತ್ರ ಬಸ್ ಗಳು ರಸ್ತೆಗೆ ಇಳಿಯಲಿದೆ – ಆರೋಗ್ಯ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿಗಳು, ಇತರೆ ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಅವಕಾಶ – ಏರ್ಪೋರ್ಟ್ ಪ್ರಯಾಣದ ಬಸ್ ನಲ್ಲಿ ಯಾವುದೇ ತೊಡಕು ಇಲ್ಲ -ಜನ ದಟ್ಟಣೆಗೆ ಅನುಸಾರವಾಗಿ KSRTC ಸೇವೆ -ಜನ ದಟ್ಟಣೆಗೆ ಅನುಸಾರವಾಗಿ ವೀಕೆಂಡ್ನಲ್ಲಿ […]

ಕೋವಿಡ್ -19 ಪ್ರಕರಣಗಳ ಹೆಚ್ಚಳದ ನಡುವೆಯೇ ಕೇಂದ್ರ ಬಜೆಟ್​ ಅಧಿವೇಶನದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಐದು ಸಂಸತ್ತಿನ ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದೆ. ಇನ್ನು ಈ ಅಧಿವೇಶನವು ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ಐದು ರಾಜ್ಯಗಳ ಚುನಾವಣೆಗ ಸಂದರ್ಭದಲ್ಲಿಯೇ ನಡೆಯಲಿದೆ. ಕೋವಿಡ್​ ಸೋಂಕು ಹೆಚ್ಚಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಅಧಿವೇಶನದ ವೇಳೆ ರಾಜ್ಯಸಭೆ ಮತ್ತು ಲೋಕಸಭೆಯ ಸಾಮಾಜಿಕ ಅಂತರ ಕಾಯ್ದಗೊಂಡು ಆಸನ ವ್ಯವಸ್ಥೆಗಳು ಸೇರಿದಂತೆ ಕೋವಿಡ್ ಮುನ್ನೆಚ್ಚರಿಕಾ […]

ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ. ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ. ಅದರಲ್ಲಿ ಬಹಳ ಕೆಲಸ ಇಲ್ಲ, ನಾನೂ ಏನೂ ಅದಕ್ಕೇ ಅಂಟಿಕೊಂಡಿಲ್ಲ. ಸಿಎಂ ಹೊರತುಪಡಿಸಿ ಕೆಲವರ ಬದಲಾವಣೆ ಆಗಬೇಕು. ಅದೇ ಮುಖ ನೋಡಿ ನೋಡಿ ಸಾಕಾಗಿದೆ ಜನರಿಗೆ. ಅಭಿವೃದ್ಧಿ ಕೆಲಸಗಳು ಆಗಬೇಕು ಎಂದು ಹೇಳಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಗಿಂತ ಶಾಸಕನಾಗೇ ಇರುವೆ ಎಂದೂ ರೇಣುಕಾಚಾರ್ಯ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. […]

ಒಂದಾನೊಂದು ಕಾಲದಲ್ಲಿ, ದೆಡೆಗೆ, ಮೈಸೂರು ದೊರೆ ಕೃಷ್ಣರಾಜ ಕುದುರೆ ಏರಿ ಬಂದ. ನದಿಯ ನೀರು ವ್ಯರ್ಥ್ಯವಾಗಿ ಹರಿಯುವುದನ್ನು ಆತ ಕಂಡ. ಆ ಕಡೆ ಬೆಟ್ಟ, ಈ ಕಡೆ ಬೆಟ್ಟಕ್ಕೆ ಅಡ್ಡಲಾಗಿ ಕಾವೇರಿ ನದಿಗೆ ಕಟ್ಟೆಯೊಂದ ಕಟ್ಟಿಸಿದ. ನಾಲೆ ತೆಗೆಸಿ, ನೀರು ಹರಿಸಿದ. ಇದರಿಂದ ಹುರುಳಿ ಬಿತ್ತುವ ಹೊಲದಲ್ಲೆಲ್ಲ ಸಿಹಿ ಕಬ್ಬು, ಬಂಗಾರ ಬಣ್ಣದ ಭತ್ತದ ಬೆಳೆ ಬೆಳೆದವು…’ ಇದು ರಾಜನೊಬ್ಬನ ಜನಪರ ಕಾಳಜಿಯ ಕುರಿತಾಗಿ ತಲೆಮಾರುಗಳಿಂದ ಜನರ ಬಾಯಲ್ಲಿ ಹಚ್ಚಹಸಿರಾಗಿರುವ ನೈಜ ಕಥೆ. […]

  ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರ ರಾಜಿನಾಮೆ ಪರ್ವ ಮುಂದುವರೆದಿದೆ. ಇಂದು ಶಿಕೋರಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಮುಕೇಶ್ ವರ್ಮಾ ಮತ್ತು ಸಚಿವ ಧರಂ ಸಿಂಗ್ ಸೈನಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಹಿಂದುಳಿದ ವರ್ಗಗಳು ಮತ್ತು ದಲಿತರ ಬಗ್ಗೆ ಸರ್ಕಾರದಿಂದ ಗೌರವದ ಕೊರತೆಯಿದೆ ಎಂದು ಆರೋಪಿಸಿ ಮುಕೇಶ್ ವರ್ಮಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಇಬ್ಬರು ಸಚಿವರು ಹಾಗೂ ಐವರು ಶಾಸಕರು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. […]

ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಇಂದು  4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸ್ ಹೈಕೋರ್ಟ್ ಅಂಗಳಕ್ಕೆ ತಲುಪಿತ್ತು ಇಂದು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್​ ನೋಟಿಸ್​ ನೀಡಿದೆ. ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ರಾಜ್ಯ ಹೈಕೋರ್ಟ್​ ನೋಟಿಸ್ ನೀಡಿದೆ.ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ […]

ಅಪೌಷ್ಟಿಕತೆ ನಿವಾರಣೆಗೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಬಜೆಟ್‌ನಲ್ಲಿ ಅಗತ್ಯ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. ನೀತಿ ಆಯೋಗದ ಸಲಹೆಗಾರೆ ಸಂಯುಕ್ತಾ ಸಮದ್ದಾರ್ ಮತ್ತು ಹಿರಿಯ ಅಧಿಕಾರಿಗಳೊಂದಿಗಿನ ಮಾತುಕತೆ ವೇಳೆ, ಮುಖ್ಯಮಂತ್ರಿಗಳು ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ರಾಜ್ಯ ಸಾಧಿಸಿದ ಪ್ರಗತಿ ಮತ್ತು ಅವುಗಳನ್ನು ಪೂರೈಸಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಮತ್ತು ಸಂಘಟನೆಗಳನ್ನು ಬಳಸಿಕೊಂಡು […]

ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ. ನದಿ ಮೂಲಗಳಲ್ಲಿರುವ 51 ಸ್ಥಳಗಳಿಗೆ ಯಾತ್ರೆ ಮೂಲಕ ಭೇಟಿ ನೀಡಲಾಗುವುದು ಎಂದರು. ಆಂದೋಲನಾಕ್ಕಾಗಿ ಪಕ್ಷದ ಶಾಸಕರು, ಮಾಜಿ ಸಚಿವರು, ಹಿರಿಯ ಮುಖಂಡರ ನೇತೃತ್ವದಲ್ಲಿ 15 ತಂಡಗಳನ್ನು ರಚಿಸಲಾಗುವುದು, ಈ ತಂಡಗಳು ನದಿ ಮೂಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, […]

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಮತ್ತು ಅವರ ಸಹೋದರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 8 ಕೋಟಿ ರೂಪಾಯಿ ನಗದು ಮತ್ತು ಮೂರು ಕಿಲೋಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಆರಂಭವಾದ ಐಟಿ ದಾಳಿ, ಇನ್ನೂ ಮುಂದುವರಿದಿವೆ ಎಂದು ಆದಾಯ ತೆರಿಗೆ(ತನಿಖೆ) ಜಬಲ್‌ಪುರ ವೃತ್ತದ ಜಂಟಿ ಆಯುಕ್ತ ಮುನ್‌ಮುನ್ ಶರ್ಮಾ ಅವರು ಪಿಟಿಐಗೆ ತಿಳಿಸಿದ್ದಾರೆ. ಈವರೆಗೆ ನಡೆಸಿದ […]

ಕೊರೋನಾ ಹೆಚ್ಚಳಗೊಳ್ಳುತ್ತಿದ್ದರೂ ಕಾಂಗ್ರೆಸ್ ತನ್ನ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ. ಪಾದಯಾತ್ರೆಗೆ ವೇದಿಕೆ ಸಿದ್ಧಪಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕನಕಪುರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈಗಾಗಲೇ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿದ್ದು, ಭಾನುವಾರದಿಂದಲೇ ಪಾದಯಾತ್ರೆ ಕೂಡ ಆರಂಭವಾಗಲಿದೆ. ಸರ್ಕಾರದ ನಿರ್ಬಂಧಗಳ ಹೊರತಾಗಿಯೂ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್, ಈ ನಿರ್ಬಂಧಗಳನ್ನು ಯಾವ ರೀತಿ ಎದುರಿಸುವುದು ಎಂಬುದರ ಕುರಿತು […]

Advertisement

Wordpress Social Share Plugin powered by Ultimatelysocial