ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ನನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದ್ದು, ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಮಂಗಳೂರು ನಗರ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದ್ದು, ನಗರದ ಹಲವೆಡೆ ನಾಕಾಬಂಧಿ ಮಾಡಿ ಬಂದೋಬಸ್ತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,306ಕ್ಕೆ […]