ವಿದ್ಯುತ್ ಟ್ರಾನ್ಸ್‌ಫಾರ್ಮರ್ಸ್‌ ಗೆ ಡಿಕ್ಕಿ ಹೊಡೆದ ಆನೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಮನಗರದ ತುಂಬೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಹಾರ ಹರಸಿಕೊಂಡು ಬಂದಿದ್ದ ಕಾಡಾನೆ ದಾರಿಯಲ್ಲಿ ಟ್ರಾನ್ಸ್‌ಫಾರ್ಮರ್ಸ್‌ ಗಮನಿಸದೇ ಡಿಕ್ಕಿ ಹೊಡೆದ ಹಿನ್ನೆಲೆ ವಿದ್ಯುತ್ ಶಾಕ್ ನಿಂದ ಗಂಡಾನೆ ಸ್ಥಳದಲ್ಲೇ ಸಾವನಪ್ಪಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರ ಮಾಡಲು ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ:ಬೈಕ್ ಸವಾರ ಸ್ಥಳದಲ್ಲೇ ಸಾವು ಒರ್ವನಿಗೆ ಗಾಯ.!

ಕಾಡಾನೆ ತುಳಿದ ಪರಿಣಾಮ ತಲೆ ಛಿದ್ರಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ನಡೆದಿದೆ.ಮೃತಪಟ್ಟ ಕಾರ್ಮಿಕನನ್ನು ಸಂದೀಪ್ ಎಂದು ಗುರುತಿಸಲಾಗಿದೆ.ಕಾಫಿ ಪಲ್ಪಿಂಗ್ ಕಣದಲ್ಲಿ ಸಂದೀಪ್ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ.ಕಳೆದ ರಾತ್ರಿ ಸಂದೀಪ್ ನಿದ್ರೆಯಲ್ಲಿದ್ದ ಸಂದರ್ಭ ಹಠಾತ್ತನೆ ಬಂದ ಕಾಡಾನೆ ದಾಳಿ ಮಾಡಿದೆ. ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಕಾರ್ಮಿಕ ಸಂದೀಪ್ ಮೃತಪಟ್ಟಿದ್ದಾನೆ.ಜೊತೆಯಲ್ಲಿದ್ದ ಮತ್ತೊಬ್ಬ ಕಾರ್ಮಿಕ ರಾಜು ಅದೃಷ್ಡವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ […]

ಅಪರಿಚಿತ ಮಹಿಳೆಯ ಶವ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಅಯ್ಯನ ಕೆರೆಯಲ್ಲಿ ಪತ್ತೆಯಾಗಿದೆ.ಸುಮಾರು 55- 60 ವಯಸ್ಸಿನ ಮಹಿಳೆಯ ಅನುಮಾನಾಸ್ಪದವಾಗಿ ಸಾವನ್ನಪಿದ್ದಾರೆ.ಕಡೂರಿನಿಂದ ಸಖರಾಯಪಟ್ಟಣಕ್ಕೆ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳೆ ಬಂದಿದ್ದು, ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.ಶವದ ಬಳಿ ಮಂಗಲ್ ದೀಪ್ ಶೋ ರೂಂ ಪರ್ಸ್ ಪತ್ತೆಯಾಗಿದೆ.ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ :ಆತ್ಮಹತ್ಯತೆಗೆ ಶರಣಾಗಿರುವ ಶಶಿಕಲಾ

Advertisement

Wordpress Social Share Plugin powered by Ultimatelysocial