ಸೀಯಾಳದ ವಿಚಾರದಲ್ಲಿ ಉಂಟಾದ ಮನಸ್ತಾಪದಿಂದ ಮಕ್ಕಳೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಮೀಪದ ಕರಾಯ ಗ್ರಾಮದ ಮುಗ್ಗದ ಆನೆಪಲ್ಲನಲ್ಲಿ ನಡೆದಿದೆ. ಧರ್ನಪ್ಪ ಪೂಜಾರಿ (೬೫) ಕೊಲೆಯಾದ ವ್ಯಕ್ತಿ. ಇವರನ್ನು ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬವರು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆನ್ನಲಾಗಿದ್ದು, ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಧರ್ನಪ್ಪ ಪೂಜಾರಿ ಮನೆಯಲ್ಲಿದ್ದ ತೆಂಗಿನ ಮರದಿಂದ ತೆಂಗಿನಕಾಯಿ, ಸೀಯಾಳಗಳನ್ನು ತೆಗೆದು ಮಾರಾಟ ಮಾಡುತ್ತಿದ್ದು, ಇದೇ […]