ಲಾಕ್ಡೌನ್ ಹಿನ್ನಲೆ ಕೆಲವು ಉದ್ಯಮಗಳು ಸ್ಥಗೀತಗೊಂಡಿದ್ದು, ಲಾಕ್ಡೌನ್ ಸಡಿಲಿಕೆ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ, ಕೆಂಪು ವಲಯದಲ್ಲಿರುವ ನಿರ್ಬಂಧಿತ ಪ್ರದೇಶ ಬಿಟ್ಟು ಉಳಿದ ಕಡೆಗಳಲ್ಲಿ ಗಾರ್ಮೆಂಟ್ಸ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅಧಿಕೃತವಾಗಿ ಆಮದು ರಫ್ತು ಕೋಡ್ ಹೊಂದಿರುವ ಮತ್ತು ಉಡುಪು ರಫ್ತು ಉತ್ತೇಜನ ಮಂಡಳಿಯಲ್ಲಿ ನೊಂದಣಿಯಾಗಿರುವ ಘಟಕಗಳನ್ನು ಕಾರ್ಯಾರಂಭಿಸಬಹುದು.