ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಒಂದು ನಡೆದಿದೆ..ಗುಬ್ಬಿ ತಾಲೂಕಿನ ಹೇರೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ ಮತ್ತು ಕಾರಿನಲ್ಲಿದ್ದ ಆಸ್ಪತ್ರೆ ವೈದ್ಯರಿಗೆ ಗಂಭೀರ ಗಾಯಗಳಾಗಿವೆ. ಸಾವನಪ್ಪಿರುವ ವ್ಯಕ್ತಿಯು ದೊಡ್ಡಗುಣಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಸಂಜಯ್ ಎಂದು ಹೇಳಲಾಗುತ್ತಿದೆ. ಇನ್ನು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಗುಬ್ಬಿ ಪೋಲೀಸರು […]
#Gubbi
ಆಕಸ್ಮಿಕ ಬೆಂಕಿಯಿಂದ ಎರಡು ಟ್ರ್ಯಾಕ್ಟರ್ ಹಾಗೂ ರಾಗಿ ಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಗುಬ್ಬಿ ತಾಲೂಕಿನ ಕಿಟ್ಟ ಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೈಜಿನ್ ಸಬ್ ಎನ್ನುವವರಿಗೆ ಸೇರಿದ ರಾಗಿ ಹುಲ್ಲು ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿಯಿಂದ 60 ಸಾವಿರಕ್ಕಿಂತ ಹೆಚ್ಚು ಬೆಲೆಬಾಳುವ ಹುಲ್ಲು ಸಂಪೂರ್ಣ ಸುಟ್ಟುಕರಕಲಾಗಿದೆ. ಸ್ಥಳಕ್ಕೆ ಅಗ್ನಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕೆಲಸ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ರಾಗಿ ಹುಲ್ಲು ಹೊಗೆಯಿಂದ ಕೂಡಿದ್ದು ಬಳಕೆಗೆ ಬರದಂತ ಸ್ಥಿತಿಗೆ ಬಂದಿದೆ. […]
ಬ್ಯಾಗ್ ತುಂಬಾ ಕಲ್ಲುಗಳನ್ನು ತುಂಬಿಕೊಂಡು ಮನೆ ಮನೆಗೆ ಕಲ್ಲು ಹೊಡೆಯುವ ಪ್ರವೃತ್ತಿಯ ಸಂಸದ ಬಸವರಾಜು ಅವರು ನಾನು ಮಾಡುವ ಅಭಿವೃದ್ದಿ ಕೆಲಸಗಳಿಗೆ ಅಡ್ಡಿ ಪಡಿಸುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ವ್ಯಂಗ್ಯವಾಡಿದರು. ತಾಲ್ಲೂಕಿನ ಕಾಳೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಗುಬ್ಬಿ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳಿಗೆ ಮಾರಕ ಎನಿಸಿರುವುದಕ್ಕೆ ಪಟ್ಟಣ […]