ಮುಜಫರ್ ಪುರ್ ನ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಬಿಜೆಪಿ ಮುಖಂಡ ಅಲ್ಪೇಶ್ ಠಾಕೂರ್ ವಿರುದ್ಧ ಕಾಂತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುಜರಾತ್ ನಲ್ಲಿ ಬಿಹಾರ ಮೂಲದ ಕಾರ್ಮಿಕರ ಮೇಲೆ ತಾರತಮ್ಯದ ಹಿನ್ನೆಲೆಯಲ್ಲಿ ಕಾಂತಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ 153, 295 ಮತ್ತು 504 ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ.