ಜಿದ್ದಾಜಿದ್ದಿನ ಕಣವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಉಸ್ತುವಾರಿಯಾಗಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,ಕ್ಷೇತ್ರಾದ್ಯಂತ ಮಿಂಚಿನ ಪ್ರಚಾರ ನಡೆಸಿ, ಮತದಾರರ ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳ್ಳಿಯಿಂದ ತಾಲೂಕು ಮಟ್ಟದವರೆಗೆ ಕಾರ್ಯಕರ್ತರನ್ನು ಭೇಟಿಯಾಗಿ, ಅಭ್ಯರ್ಥಿ ಶಿವರಾಜ ಸಜ್ಜನ ಪರ ಮತಯಾಚನೆ ಮಾಡಿದರು. ನಾಮಪತ್ರ ಸಲ್ಲಿಕೆ ವೇಳೆ ಖುದ್ದು ಹಾಜರಿದ್ದ ನಿರಾಣಿ, ಕಾರ್ಯಕರ್ತರ ಜೊತೆಗೂಡಿ ಕ್ಷೇತ್ರದ ನಾನಾ ಕಡೆ ಮತಯಾಚನೆ ಮಾಡಿದ್ದರು.ಕಳೆದ ಒಂದು ವಾರದಿಂದ ಹಾನಗಲ್ನಲ್ಲೇ ಬೀಡುಬಿಟ್ಟಿದ್ದ ನಿರಾಣಿ, ಬೆಳಗ್ಗೆಯಿಂದ ಸಂಜೆವರೆಗೂ […]