ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತಗಳಿಂದ ಎಚ್ಚರಿಕೆ ಫಲಕಗಳನ್ನು ಹಾಕುತ್ತಿರುವುದು ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸೋಂಕಿತ ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕೆಂದು ಹೇಳಿದ್ದಾರೆ. ಸೋಂಕಿತರ ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ […]