ಕೊರೊನಾ ವೈರಸ್ ಪಾಸಿಟಿವ್ ವ್ಯಕ್ತಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸದೆ ಆರೋಗ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕೊರೊನಾ ಸೋಂಕು ದೃಢವಾದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ನರಳಾಟ ಅನುಭವಿಸಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 13 ರಂದು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದ 33 ವರ್ಷದ ವ್ಯಕ್ತಿಗೆ ನಿನ್ನೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಚಿತ್ರದುರ್ಗದ ನೆಹರೂ ನಗರದ ಮನೆಯಲ್ಲಿ ವಾಸವಿರುವ ಸೋಂಕಿತ ವ್ಯಕ್ತಿಯನ್ನು ಕೋವಿಡ್ […]