ನವಜಾತ ಶಿಶುವನ್ನು ಹೊತ್ತುಕೊಂಡು ಊರಿಗೆ ತೆರಳಲಾಗದ ಬಾಣಂತಿ ಹಾಗೂ ಅವರ ಪೋಷಕರಿಗೆ ಪೊಲೀಸರು ಊರಿಗೆ ತಲುಪಲು ಸಹಾಯ ಮಾಡುವ ಮೂಲಕ ಮಾನವೀಯತೆ ತೋರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಿತ್ತೂರಿನ ಮಹಿಳೆಯೊಬ್ಬರು ಹೆರಿಗೆಗೆಂದು ನಗರ ಸಿಟಿ ಕ್ಲಿನಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಗೆ ಹೆರಿಗೆಯಾಗಿ ಮೂರು ದಿನವಾದ ನಂತರ ಇಂದು ಕ್ಲಿನಿಕ್ ನವರು ಏಕಾಏಕಿ ಡಿಸ್ಚಾರ್ಜ್ ಮಾಡಿದ್ದಾರೆ. ಆದ್ರೆ ಲಾಕ್ಡೌನ್ ಆಗಿದ್ದರಿಂದ ಬಸ್ ವ್ಯವಸ್ಥೆ ಇಲ್ಲ. ಹೀಗಾಗಿ ನಾಳೆ ಡಿಸ್ಚಾರ್ಜ್ ಮಾಡುವಂತೆ ಮಹಿಳೆ […]