ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಗುರುತು ಪತ್ತೆಯಾಗದ ಉಗ್ರಗಾಮಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಎನ್ಕೌಂಟರ್ ನಡೆಯಿತು ಎಂದು ಅವರು ಹೇಳಿದ್ದಾರೆ.ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಮುತ್ತಿಗೆ ಮತ್ತು ಶೋಧಕಾರ್ಯಾಚರಣೆ ಆರಂಭಿಸಿದ್ದವು.ಆಗ ಉಗ್ರರೊಂದಿಗೆ ಗುಂಡಿನ ಚಕಮಕಿ ಉಂಟಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ಹತ ಉಗ್ರನ ಗುರುತು ಮತ್ತು ಆತ ಯಾವ ಉಗ್ರಗಾಮಿ ಸಂಘಟನೆಗೆ ಸೇರಿದವನು ಎಂಬುದು […]
Indian Army
ತಮಿಳುನಾಡು ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಭೋಪಾಲ್ನಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆ ಸುಮಾರಿಗೆ ಧಾರ್ಮಿಕ ವಿಧಿ ವಿಧಾನ ನಡೆಯಲಿದೆ.ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ರಾಜ್ಯ ಮತ್ತು ಮಿಲಿಟರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಗುರುವಾರ ಮುಂಜಾನೆ, ಸಿಂಗ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿAದ ಭೋಪಾಲ್ ವಿಮಾನ […]
CDS ಚಾಪರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಐಎಎಫ್ ಕಮಾಂಡ್ ಆಸ್ಪತ್ರೆಯಲ್ಲಿ ವಿಧಿವಶರಾದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥೀವ ಶರೀರವನ್ನು ಅಂತಿಮ ಗೌರವಗಳಿಗಾಗಿ ಇದೀಗ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಆವರಣದಲ್ಲಿ ಕರೆತರಲಾಗುತ್ತಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್ ಅವರು ಸರ್ಕಾರದ ಪರವಾಗಿ ವ್ರೀತ್ ಮೂಲಕ ಗೌರವ ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ.
ವಿಜಯ ದಿವಸ್ ಕಾರ್ಯಕ್ರಮದಹಿನ್ನೆಲೆ ಬೆಳಗಾವಿಯ ಎಂಎಲ ಐ ಆರ್ ಸಿ ವಿಜಯ ದಿವಸ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು,ವಿಜಯ ದಿವಸ ಕಾರ್ಯಕ್ರಮದಲ್ಲಿ ಸರ್ಕಾರದ ಆದೇಶವನ್ನ ಸಿಎಂ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ನಾನು ಅತ್ಯಂತ ಹೆಮ್ಮೆ ಮತ್ತು ಸಂತೋಷದಿಂದ ಪಾಲ್ಗೊಂಡಿದ್ದೇನೆ.ಸೈನ್ಯ ಬರಿ ದೇಶದ ಸಂರಕ್ಷಣೆ ಮಾಡುತ್ತಿಲ್ಲ,ಆಂತರಿಕ ಭದ್ರತೆಯನ್ನ ಸಮರ್ಥ ವಾಗಿ ಮಾಡುತ್ತಿದೆ.ಇಂಡೋ ಪಾಕ್ ಯುದ್ಧದಲ್ಲಿ ನಮ್ಮ ಸೈನಿಕರು ತಮ್ಮ ಶೌರ್ಯ ಪ್ರದರ್ಶನ ಮಾಡಿದ್ದಾರೆ.3 ಸಾವಿರಕ್ಕೂ ಅಧಿಕ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ.9 ಸಾವಿರಕ್ಕೂ […]