ಮರಾಠ ಪ್ರಾಧಿಕಾರ ರಚನೆ ನಿರ್ಧಾರವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಡಿಸೆಂಬರ್ 5ರ ಕರೆ ನೀಡಿರುವ ಕರ್ನಾಟಕ ಬಂದ್ ನೂರಕ್ಕೆ ನೂರರಷ್ಟು ನಡೆಯುವುದು ಖಚಿತ ಎಂದು ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ತಿಳಿಸಿದರು.ಹಾಸನದಲ್ಲಿ ಮಾತನಾಡಿದ ಅವರು, ಬಹಳ ಗಂಭೀರವಾದ ವಿಚಾರದಲ್ಲಿ ಕರ್ನಾಟಕ ಬಂದ್ ಕರೆದಿದ್ದೇವೆ. 5ನೇ ತಾರೀಖು ಬೆಳಿಗ್ಗೆ 6 ಗಂಟೆ ಸಮಯದಿಂದ ಸಂಜೆ 5 ಗಂಟೆವರೆಗೆ ಬಂದ್ ನಡೆಯಲಿದೆ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕನ್ನಡಿಗರ ನಡುವಿನ ಹೋರಾಟವಾಗಿದೆ. ಯಡಿಯೂರಪ್ಪರವರ […]