ಸಿದ್ದರಾಮಯ್ಯ ಅವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಅಲ್ಪಸಂಖ್ಯಾತ ನಿಜವಾದ ವಿರೋಧಿ. ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿಯಾಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಂದಗಿ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಚ್.ಡಿ. ದೇವೇಗೌಡರು ಕೂಡ ಅಲ್ಪಸಂಖ್ಯಾತರ ವಿರೋಧಿಯಲ್ಲ. ಕುಮಾರಸ್ವಾಮಿ ಮಾತ್ರ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಕುಟುಕಿದರು. […]